ಸವಣೂರು ಮೊಗರು ಶಾಲೆಗೆ ಸ್ಪೀಕರ್ ಯು.ಟಿ ಖಾದರ್, ಶಾಸಕ ಅಶೋಕ್ ರೈ ಭೇಟಿ – ಶಾಲೆಗೆ ಹೆಚ್ಚಿನ ಸೌಲಭ್ಯಗಳನ್ನು ಒದಗಿಸಿಕೊಡುವ ಭರವಸೆ

0

ಪುತ್ತೂರು: ಸ್ಪೀಕರ್ ಯು.ಟಿ ಖಾದರ್ ಹಾಗೂ ಶಾಸಕ ಅಶೋಕ್ ಕುಮಾರ್ ರೈಯವರು ಜೂ.14ರಂದು ಸವಣೂರು ಮೊಗರು ಸ.ಹಿ.ಪ್ರಾ.ಶಾಲೆಗೆ ಭೇಟಿ ನೀಡಿ ಶಾಲೆಯ ಮೂಲಭೂತ ಅವಶ್ಯಕತೆಗಳ ಬಗ್ಗೆ ಪರಿಶೀಲನೆ ನಡೆಸಿ ಶಾಲೆಯಲ್ಲಿ ಮುಂದೆ ಆಗಬೇಕಾದ ಕೆಲಸ ಕಾರ್ಯಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಅಲ್ಲದೇ ಸರಕಾರದಿಂದ ಸಿಗುವ ಸೌಲಭ್ಯಗಳನ್ನು ಮುಂದಿನ ದಿನಗಳಲ್ಲಿ ಒದಗಿಸಿಕೊಡುವುದಾಗಿ ಭರವಸೆ ನೀಡಿದರು.


ನಂತರ ಶಾಲಾ ಶಿಕ್ಷಕರು, ಶಾಲಾಭಿವೃದ್ದಿ ಸಮಿತಿ, ವಿದ್ಯಾರ್ಥಿಗಳು ಹಾಗೂ ಎಲ್.ಕೆ.ಜಿ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದರು. ಯು.ಟಿ ಖಾದರ್ ಮತ್ತು ಅಶೋಕ್ ಕುಮಾರ್ ರೈಯವರನ್ನು ಶಾಲೆಯ ಪರವಾಗಿ ಶಾಲು ಹೊದಿಸಿ, ಪೇಟ ತೊಡಿಸಿ ಸನ್ಮಾನಿಸಲಾಯಿತು. ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ರಫೀಕ್ ಎಂ.ಎ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಸವಣೂರು ಗ್ರಾ.ಪಂ ಸದಸ್ಯರು, ಎಸ್‌ಡಿಎಂಸಿಯವರು, ಶಿಕ್ಷಕ ವೃಂದದವರು, ವಿದ್ಯಾರ್ಥಿ ವೃಂದ, ಪೋಷಕರು, ವಿದ್ಯಾಭಿಮಾನಿಗಳು, ಊರವರು, ಹಿರಿಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here