ಉಪ್ಪಿನಂಗಡಿ: ಹಿರೇಬಂಡಾಡಿ ಗ್ರಾ.ಪಂ.ನ ಅಭಿವೃದ್ಧಿ ಅಧಿಕಾರಿಯಾಗಿ ಸತೀಶ್ ಬಂಗೇರ ಅವರನ್ನು ನಿಯೋಜಿಸಿ ಆದೇಶಿಸಿ ತಾ.ಪಂ.ನ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ ಆದೇಶಿಸಿದ್ದಾರೆ.
ಇಲ್ಲಿ ಪಿಡಿಒ ಆಗಿದ್ದ ಅವಿನಾಶ್ ಬಿ.ಆರ್. ಅವರನ್ನು ಒಳಮೊಗ್ರು ಗ್ರಾ.ಪಂ.ನಲ್ಲಿ ಪೂರ್ಣ ಪ್ರಮಾಣದಲ್ಲಿ ಕರ್ತವ್ಯ ನಿರ್ವಹಿಸಲು ಆದೇಶಿಸಿ, ಹಿರೇಬಂಡಾಡಿ ಗ್ರಾ.ಪಂ.ನಲ್ಲಿ ಕಾರ್ಯದರ್ಶಿಯಾಗಿದ್ದ ಸತೀಶ್ ಅವರನ್ನು ಹಿರೇಬಂಡಾಡಿ ಗ್ರಾ.ಪಂ.ನ ಅಭಿವೃದ್ಧಿ ಅಧಿಕಾರಿಯಾಗಿ ಹೆಚ್ಚುವರಿ ಪ್ರಭಾರದಲ್ಲಿರಿಸಿ ಆದೇಶಿಸಲಾಗಿದೆ.