ಆ.2ರಂದು ಪ್ರಬಂಧ ಸ್ಪರ್ಧೆ, ಭಾಷಣ ಸ್ಪರ್ಧೆ, ಹಾಗೂ ಸ್ವ ರಚಿತ ಕವನ ಸ್ಪರ್ಧೆ
ಉಪ್ಪಿನಂಗಡಿ: ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಉಪ್ಪಿನಂಗಡಿ ಹೋಬಳಿ ಘಟಕದ ವತಿಯಿಂದ ವಿದ್ಯಾರ್ಥಿಗಳಲ್ಲಿ ಸಾಹಿತ್ಯಾಸಕ್ತಿಯನ್ನು ಮೂಡಿಸಿ ಅವರಲ್ಲಿನ ಪ್ರತಿಭೆಯನ್ನು ಅನಾವರಣಗೊಳಿಸುವ ಸಲುವಾಗಿ ಕನ್ನಡ ಕಲರವ -2 ಕಾರ್ಯಕ್ರಮವನ್ನು ಆ.9 ರಂದು ಆಯೋಜಿಸಲಾಗಿದ್ದು, ಕಾರ್ಯಕ್ರಮದ ಅಂಗವಾಗಿ ದಿನಾಂಕ ಆ.2ರ ಶನಿವಾರದಂದು ಉಪ್ಪಿನಂಗಡಿ ಹೋಬಳಿ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ, ಭಾಷಣ ಸ್ಪರ್ಧೆ, ಹಾಗೂ ಸ್ವ ರಚಿತ ಕವನ ಸ್ಪರ್ಧೆಯನ್ನು ಆಯೋಜಿಸಲಾಗಿದೆ.
ಸ್ಪರ್ಧೆಯು ಹಿರಿಯ ಪ್ರಾಥಮಿಕ, ಪ್ರೌಢ, ಕಾಲೇಜು ವಿಭಾಗದಲ್ಲಿ ನಡೆಯಲಿದ್ದು, ಭಾಗವಹಿಸಲಿಚ್ಚಿಸುವ ವಿದ್ಯಾರ್ಥಿಗಳು ಜು.20ರ ಒಳಗಾಗಿ ಹೆಸರನ್ನು ಶಾಲಾ ಮುಖ್ಯೋಪಾಧ್ಯಾಯರ ದೃಢೀಕರಣದೊಂದಿಗೆ ಸಲ್ಲಿಸಬೇಕೆಂದು ತಿಳಿಸಲಾಗಿದೆ.
ಪ್ರಬಂಧ ಸ್ಪರ್ಧೆಯ ವಿಷಯ : ನಾ ಕಂಡ ತೆರೆಮರೆಯ ಸ್ವಾತಂತ್ರ್ಯ ಯೋಧ (ಇತಿಹಾಸದ ಪುಟಗಳಲ್ಲಿ ದಾಖಲಾಗದೆ ಉಳಿದಿರುವ ದೇಶಕ್ಕಾಗಿ ಪ್ರಾಣಾರ್ಪಣೆ ಗೈದಿರುವ ಸ್ವಾತಂತ್ರ್ಯ ಯೋಧರ ಬಗ್ಗೆ ಬೆಳಕು ಚೆಲ್ಲುವ ಬರಹ ) ಭಾಷಣ ಸ್ಪರ್ಧೆಯಲ್ಲಿ : ಹಿರಿಯ ಪ್ರಾಥಮಿಕ ವಿಭಾಗ: ಆಪರೇಷನ್ ಸಿಂಧೂರ, ಪ್ರೌಢ ವಿಭಾಗ : ಜಗತ್ತಿನ ಶ್ರೇಷ್ಟ ರಾಷ್ಟ್ರವಾಗಿ ಮುನ್ನುಗ್ಗುತ್ತಿರುವ ಭಾರತ, ಕಾಲೇಜು ವಿಭಾಗ : ನವ ಭಾರತ ನಿರ್ಮಾಣದಲ್ಲಿ ದೇಶ ಎದುರಿಸುತ್ತಿರುವ ಸವಾಲುಗಳು ಎಂಬ ವಿಷಯವನ್ನು ನೀಡಲಾಗಿದೆ.
ಸ್ವರಚಿತ ಕವನ ವಾಚನ ವಿಷಯ : ನಮ್ಮ ದೇಶಕ್ಕೆ ಸಂಬಂಧಿಸಿದ ಯಾವುದೇ ವಿಷಯವನ್ನು ಆಧರಿಸಿ ಸ್ವ ರಚಿಸಿದ ಕವನವನ್ನು ವಾಚಿಸುವುದು. ಸ್ಪರ್ಧೆಯು ದಿನಾಂಕ 2/08/2025 ರ ಶನಿವಾರ ಮಧ್ಯಾಹ್ನ 2.00 ಗಂಟೆಯಿಂದ ಇಂದ್ರಪ್ರಸ್ಥ ವಿದ್ಯಾಲಯದಲ್ಲಿ ನಡೆಯಲಿದ್ದು, ಸ್ಪರ್ಧಾ ವಿಜೇತರಿಗೆ ಬಹುಮಾನವನ್ನು ದಿನಾಂಕ 9/08/2025ರ ಶನಿವಾರದಂದು ಮಧ್ಯಾಹ್ನ ನಡೆಯಲಿರುವ ಕನ್ನಡ ಕಲರವ -2 ರ ಕಾರ್ಯಕ್ರಮದಲ್ಲಿ ವಿತರಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ : 9743687614, 9591340959 ಸಂಪರ್ಕಿಸಬಹುದಾಗಿದೆ ಎಂದು ಉಪ್ಪಿನಂಗಡಿ ಹೋಬಳಿ ಘಟಕದ ಅಧ್ಯಕ್ಷ ಕರುಣಕಾರ ಸುವರ್ಣ ತಿಳಿಸಿದ್ದಾರೆ.