ಈಶ್ವರಮಂಗಲ: ಶ್ರೀ ಪಂಚಲಿಂಗೇಶ್ವರ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ

0

ಈಶ್ವರಮಂಗಲ: ಶ್ರೀ ಪಂಚಲಿಂಗೇಶ್ವರ ಪ್ರೌಢಶಾಲೆ ಈಶ್ವರಮಂಗಲದಲ್ಲಿ 100% ಫಲಿತಾಂಶ ಪಡೆದ 10ನೇ ತರಗತಿ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿಗಳಿಗೆ ಶಾಲಾ ಆಡಳಿತ ಮಂಡಳಿ ವತಿಯಿಂದ ಅಭಿನಂದನಾ ಸಮಾರಂಭ ನಡೆಯಿತು.

ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ವಾಸಪ್ಪ ಗೌಡ ದೇಲಂಪಾಡಿ ಇವರು ಶಾಲೆಯ ಎಲ್ಲಾ ಶಿಕ್ಷಕರ ಶ್ರಮ ಹಾಗೂ ವಿದ್ಯಾರ್ಥಿಗಳ ಶಿಸ್ತಿನ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದರು. ಶಾಲಾ ಆಡಳಿತ ಮಂಡಳಿಯ ವತಿಯಿಂದ ಎಲ್ಲಾ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕ- ಶಿಕ್ಷಕೇತರರಿಗೆ ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು. ಸಮಾರಂಭದ ವೇದಿಕೆಯಲ್ಲಿ ನಿವೃತ್ತ ಮುಖ್ಯಗುರು ನಾರಾಯಣ ಭಟ್, ನಿವೃತ್ತ ಅಧ್ಯಾಪಕ ನಾಗಪ್ಪ ಗೌಡ ,ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರವೀಂದ್ರ ಮಾಣಿಲತ್ತಾಯ, ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಗೋಪಾಲಕೃಷ್ಣ ಕುಂಜತ್ತಾಯ ,ಸಂಚಾಲಕರಾದ ಸರ್ವೋತ್ತಮ ಬೋರ್ಕರ್ ,ಉಪಾಧ್ಯಕ್ಷ ಸೀತಾರಾಮ ಭಟ್ ಬರೆಕೆರೆ ಹಾಗೂ ಶಾಲಾ ಮುಖ್ಯಗುರು ವನಿತಾ ಕೆ ಉಪಸ್ಥಿತರಿದ್ದರು.

ಕಾರ್ಯಕ್ರಮದ ಸ್ವಾಗತವನ್ನು ಶಾಲಾ ಸಂಚಾಲಕರು, ಧನ್ಯವಾದವನ್ನು ಶಿಕ್ಷಕಿ ಪ್ರತಿಮಾ ಹಾಗೂ ಕಾರ್ಯಕ್ರಮದ ನಿರೂಪಣೆಯನ್ನು ಶಿಕ್ಷಕಿ ವಂದನ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಎಲ್ಲಾ ಪೋಷಕರು,ಆಡಳಿತ ಮಂಡಳಿಯ ನಿರ್ದೇಶಕರುಗಳು, ಸದಸ್ಯರು ಹಾಗೂ ಶಿಕ್ಷಕ – ಶಿಕ್ಷಕೇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here