ಪುತ್ತೂರು: ಆಪರೇಷನ್ ಸಿಂಧೂರ್ ಯಶಸ್ವಿಯ ಬಳಿಕ ರಜೆಯಲ್ಲಿ ಊರಿಗೆ ಮರಳಿದ ಬೆಳ್ಳಿಪ್ಪಾಡಿ ಮಲುವೇಲು ಕುಟುಂಬದ ಯೋಧ ಬಿ.ಎಸ್.ಎಫ್ ಟೀಮ್ ಕಮಾಡೆಂಡ್ ಪದ್ಮನಾಭ ಗೌಡ ಅವರನ್ನು ಇತಿಹಾಸ ಪ್ರಸಿದ್ಧ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಸಾದ ನೀಡಿ ದೇವಳದ ಶಲ್ಯ ತೊಡಿಸಿ ಗೌರವಿಸಲಾಯಿತು.

ದೇವಳದ ಪ್ರಧಾನ ಅರ್ಚಕ ವೇ ಮೂ ವಿ.ಎಸ್ ಭಟ್ ಅವರು ಪ್ರಸಾದ ವಿತರಿಸಿದರು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆಯವರು ದೇವಳದ ಕಡೆಯಿಂದ ಶಲ್ಯ ತೊಡಿಸಿ ಗೌರವಿಸಿದರು. ಈ ಸಂದರ್ಭ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯ ವಿನಯ ಸುವರ್ಣ ಉಪಸ್ಥಿತರಿದ್ದರು.