ಕಾಣಿಯೂರು: ಕುದ್ಮಾರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಗುರುಗಳಾಗಿ ಸೇವೆ ಸಲ್ಲಿಸಿ ಮೇ 31ರಂದು ಸೇವೆಯಿಂದ ನಿವೃತ್ತಿಗೊಂಡಿರುವ ಬಿ. ಕುಶಾಲಪ್ಪರವರಿಗೆ ಸನ್ಮಾನ ಹಾಗೂ ವಿದಾಯ ಸಮಾರಂಭ ಮತ್ತು ಕುಶಾಲಪ್ಪ ಬಿ ಇವರು ಶಾಲೆಗೆ ಕೊಡುಗೆಯಾಗಿ ನೀಡಿರುವ ನೂತನ ಧ್ವಜ ಕಟ್ಟೆ ಉದ್ಘಾಟನಾ ಕಾರ್ಯಕ್ರಮವು ಜೂ 21ರಂದು ಬೆಳಿಗ್ಗೆ ನಡೆಯಲಿದೆ ಎಂದು ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ದೇವರಾಜ್ ನೂಜಿ, ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ, ಶಾಲಾ ಪ್ರಭಾರ ಮುಖ್ಯಗುರು ಶ್ರೀಲತಾ ಅವರು ತಿಳಿಸಿದ್ದಾರೆ.
Home ಇತ್ತೀಚಿನ ಸುದ್ದಿಗಳು ಜೂ 21- ಕುದ್ಮಾರು ಶಾಲಾ ಮುಖ್ಯಗುರು ಕುಶಾಲಪ್ಪರವರಿಗೆ ವಿದಾಯ ಸಮಾರಂಭ- ನೂತನ ಧ್ವಜ ಕಟ್ಟೆ ಉದ್ಘಾಟನೆ