ಅಬಕಾರಿ ಡಿವೈಎಸ್ಪಿ ಗಾಯತ್ರಿ ನೇತೃತ್ವದಲ್ಲಿ ಕಾರ್ಯಾಚರಣೆ: ಚಾಕಲೇಟ್ ಹೋಲುವ ಮಾದಕ ದೃವ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿ ಬಂಧನ

0

ಪುತ್ತೂರು: ಮಂಗಳೂರು ಪಂಪ್ವೆಲ್ ಹತ್ತಿರದಲ್ಲಿರುವ ಕೆನರಾ ಬ್ಯಾಂಕ್ ಮುಂದುಗಡೆ ಪಾನ್ ಶಾಪ್ ನಲ್ಲಿ ವ್ಯಕ್ತಿಯೊಬ್ಬ ಚಾಕಲೇಟ್ ನಂತೆ ಕಾಣುವ ಮಾದಕ ದ್ರವ್ಯದ ಸುವಾಸನೆಯುಳ್ಳ ಚಾಕಲೇಟ್ ಮಾರಾಟ ನಡೆಸುತ್ತಿದ್ದ ವೇಳೆ ಮಂಗಳೂರು ಉಪವಿಭಾಗದ ಅಬಕಾರಿ ಪೊಲೀಸರು ದಾಳಿ ನಡೆಸಿ ಓರ್ವನನ್ನು ಬಂಧಿಸಿದ ಘಟನೆ ನಡೆದಿದೆ.


ಉತ್ತರ ಪ್ರದೇಶ ಮೂಲದ ಸುಜಿತ್ ಕುಮಾರ್ ಬಂಧಿತ ವ್ಯಕ್ತಿ. ಆತನಿಂದ 303 ಗ್ರಾಂ. ಬಮ್ ಬಮ್ ಚಾರ್ ಮಿನಾರ್ ಹೆಸರಿನ ಮಾದಕ ದ್ರವ್ಯ ಸುವಾಸನೆಯುಳ್ಳ ಚಾಕಲೇಟ್ ವಶಕ್ಕೆ ಪಡೆದುಕೊಳ್ಳಲಾಗಿದ್ದು, ಎನ್.ಡಿ.ಪಿ.ಎಸ್ ಆಕ್ಟ್ 1985 ಕಲಂ 8(c) 20(b)(11)(A) & 25ರಂತೆ ಪ್ರಕರಣ ದಾಖಲಾಗಿದೆ. ಈ ಹಿಂದೆ ಪುತ್ತೂರಿನಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿಯಾಗಿದ್ದು ಪ್ರಸ್ತುತ ಮಂಗಳೂರು ಉಪ ವಿಭಾಗದ ಅಬಕಾರಿ ಉಪಾಧೀಕ್ಷರಾಗಿರುವ ಗಾಯತ್ರಿ ಸಿ.ಹೆಚ್. ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು ಮಂಗಳೂರು ಉಪ ವಿಭಾಗ ಉಪನೀರಿಕ್ಷಕರಾದ ಸುಧೀರ್ ಕುಮಾರ್ ಪ್ರಕರಣ ದಾಖಲಿಸಿದ್ದಾರೆ. ಉಪನಿರೀಕ್ಷಕ ಹರೀಶ್ ಪಿ, ಹೆಡ್ ಕಾನ್ಸ್ಟೇಬಲ್ ಸಂಧ್ಯಾ ಭಟ್, ಕಾನ್ಸ್ಟೇಬಲ್ ಮಾರುತಿ ಡಿ.ಜೆ. ಮತ್ತು ವಾಹನ ಚಾಲಕ ಹರೀಶ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here