ಪುತ್ತೂರು: ದ.ಕ.ಜಿ.ಪಂ.ಹಿ.ಪ್ರಾ.ಶಾಲೆ ಸಜಂಕಾಡಿ ಯಲ್ಲಿ ವಿದ್ಯಾರ್ಥಿಗಳಲ್ಲಿ ಏಕಾಗ್ರತೆ ಹೆಚ್ಚಿಸಲು ಪೂರಕವಾಗುವ ವಿವಿಧ ಪ್ರಾಣಾಯಾಮಗಳು ಹಾಗೂ ಶಾರೀರಿಕ ದೃಢತೆಯನ್ನು ಉಂಟುಮಾಡುವ ಯೋಗಾಸನದ ವಿವಿಧ ಭಂಗಿಗಳ ಪ್ರದರ್ಶನ, ಮಾಹಿತಿಯೊಂದಿಗೆ ವಿಶ್ವಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಪ್ರಭಾರ ಮುಖ್ಯಗುರು ಸುಮಲತಾ ಪಿ.ಕೆ ಯೋಗದಿನದ ಮಹತ್ವದ ಕುರಿತು ಮಾಹಿತಿ ನೀಡಿದರು. ಹಿರಿಯ ಶಿಕ್ಷಕಿ ಶಶಿಕಲಾ, ಅತಿಥಿ ಶಿಕ್ಷಕಿ ಆಯಿಷತ್ ಮಿಸ್ರಿಯ ಉಪಸ್ಥಿತರಿದ್ದರು. ಶಿಕ್ಷಕ ಗಣೇಶ್ ನಾಯಕ್ ಪಿ ವಂದಿಸಿದರು.
