ಪಟ್ಟೆ ಶ್ರೀ ಕೃಷ್ಣ ವಿದ್ಯಾಸಂಸ್ಥೆಯಲ್ಲಿ ವಿಶ್ವ ಯೋಗ ದಿನಾಚರಣೆ

0

ಬಡಗನ್ನೂರು: ಪಟ್ಟೆ ಶ್ರೀ ಕೃಷ್ಣ ವಿದ್ಯಾಸಂಸ್ಥೆಯ ಶಾಲಾ ಸಭಾಂಗಣದಲ್ಲಿ ವಿಶ್ವ ಯೋಗ ದಿನಾಚರಣೆ ಜೂ.21ರಂದು ನಡೆಯಿತು.

ದೀಪ ಪ್ರಜ್ವಲನೆ ಮಾಡಿ ಮಾತನಾಡಿದ ಸಂಸ್ಥೆಯ ಸಂಚಾಲಕ ವಿಘ್ನೇಶ್ ಹಿರಣ್ಯ, ದೇಹ ಮತ್ತು ಮಾನಸಿಕ ಸದೃಢತೆಯನ್ನು ಕಾಪಾಡುವ ಅತ್ಯುತ್ತಮ ಅಭ್ಯಾಸ ಯೋಗ ಎಂದು ತಿಳಿಸಿದರು.
ಪ್ರಾಥಮಿಕ ಶಾಲಾ ಮುಖ್ಯಗುರು ರಾಜಗೋಪಾಲ ಎನ್ ರವರು ಮನಸ್ಸಿನ ಏಕಾಗ್ರತೆ, ದೇಹದ ಆರೋಗ್ಯಕ್ಕೆ ಯೋಗ ಸಂಜೀವಿನಿ ಎಂದು ತಿಳಿಸಿದರು.


ಪ್ರಾಥಮಿಕ ಶಾಲಾ ಎಸ್ ಡಿಎ ಸಿ ಅಧ್ಯಕ್ಷ ಕೇಶವ ಪ್ರಸಾದ್ ನೀಲಗಿರಿ, ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಸತೀಶ್ ಕೊಪ್ಪಳ ಇವರು ಉಪಸ್ಥಿತರಿದ್ದರು. ಪ್ರೌಢಶಾಲಾ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಪ್ರಾಥಮಿಕ ಶಾಲಾ ಶಿಕ್ಷಕಿ ಜ್ಯೋತಿ ಕುಮಾರಿ ಇವರು ಸ್ವಾಗತಿಸಿ, ಪ್ರೌಢಶಾಲಾ ಮುಖ್ಯ ಗುರು ಸುಮನಾ ಬಿ ಇವರು ವಂದಿಸಿದರು. ಪ್ರೌಢಶಾಲಾ ವಿಜ್ಞಾನ ಶಿಕ್ಷಕಿ ಭವಿತಾ ಪಿ ಕಾರ್ಯಕ್ರಮವನ್ನು ನಿರೂಪಿಸಿದರು.

ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಭಾರತಿ ಮತ್ತು 9ನೇ ತರಗತಿ ವಿದ್ಯಾರ್ಥಿ ಆದಿತ್ಯ ಕೃಷ್ಣ ಇವರಿಂದ ಯೋಗ ಪ್ರಾತ್ಯಕ್ಷಿಕೆಗಳು ನಡೆಯಿತು. ಎಲ್ಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕ ವೃಂದದವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

LEAVE A REPLY

Please enter your comment!
Please enter your name here