ಪುತ್ತೂರು: ಅಲ್ಪ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಬನ್ನೂರು ಮೇಲ್ಮಜಲು ಚರ್ಚ್ ಬಳಿ ನಿವಾಸಿ ಅಣ್ಣಪ್ಪ (26 ವ.) ಇಂದು(ಜೂ.21)ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ವಿಶೇಷ ವೇಷ ಧರಿಸಿ ಪುತ್ತೂರಿನ ಸೇವಾ ಸಂಸ್ಥೆ ಸಹಾಯಹಸ್ತ ಲೋಕಸೇವಾ ಟ್ರಸ್ಟಿನ ಮೂಲಕ ಹಲವಾರು ಬಡ ಕುಟುಂಬದ ಮಕ್ಕಳಿಗೆ ಮತ್ತು ಆರೋಗ್ಯದ ಸಮಸ್ಯೆ ಇರುವಂತಹ ವ್ಯಕ್ತಿಗಳಿಗೆ ಸಹಾಯ ಮಾಡುತ್ತಿದ್ದರು. ಕಲಾಸಿರಿ ಗೊಂಬೆ ಬಳಗ (ರಿ) ಪುತ್ತೂರು ಸಂಸ್ಥೆಯನ್ನು ಪ್ರಾರಂಭಿಸಿ, ಜಾತ್ರೆ ಮತ್ತೀತರ ಕಾರ್ಯಕ್ರಗಳಲ್ಲಿ ವಿವಿಧ ರೀತಿಯ ವೇಷ ಹಾಕಿ ಅದರಲ್ಲಿ ಬಂದಂತಹ ಹಣವನ್ನು ಒಟ್ಟು ಮಾಡಿ ಸಹಾಯ ಮಾಡುತ್ತಿದ್ದರು.
ಮೃತರು ಸಹೋದರಿಯನ್ನು ಅಗಲಿದ್ದಾರೆ.