ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಾದಾಚಾರಿಗೆ ಡಿಕ್ಕಿ ಹೊಡೆದು ರಸ್ತೆ ಬದಿಯ ಧರೆಗೆ ಡಿಕ್ಕಿಹೊಡೆದು ನಿಂತ ಘಟನೆ ಅಡ್ಯನಡ್ಕ ಬಳಿ ನಡೆದಿದೆ.
ಘಟನೆಯಿಂದಾಗಿ ಪಾದಚಾರಿಗೆ ಮತ್ತು ಕಾರು ಚಾಲಕನಿಗೆ ಗಾಯವಾಗಿದ್ದು, ಅವರನ್ನು ಕೇಪು ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಾಘವ ಮಣಿಯಾಣಿರವರು ಸ್ಥಳೀಯರ ಸಹಕಾರದೊಂದಿಗೆ ವಿಟ್ಲ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.
