
puttur: ಶ್ರೀರಾಮಕುಂಜೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆಯ ಪ್ರಯುಕ್ತ ವಿದ್ಯಾರ್ಥಿಗಳಿಂದ ಯೋಗ ಪ್ರದರ್ಶನವು ನಡೆಯಿತು. ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಗಣೇಶ್ , ಯೋಗದ ವಿವಿಧ ಆಸನಗಳನ್ನು ಮಾಡುವ ಬಗೆ ಮತ್ತು ಅದರ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿ ಮಾತನಾಡುತ್ತಾ “ನಿರಂತರವಾಗಿ ಯೋಗ ಅಭ್ಯಾಸವನ್ನು ಮಾಡಿದಂತಹ ಸಂದರ್ಭದಲ್ಲಿ ದೈಹಿಕವಾಗಿ ಒಬ್ಬ ವ್ಯಕ್ತಿ ಸದೃಢನಾಗುವುದಲ್ಲದೆ ಮಾನಸಿಕವಾಗಿಯೂ ಬಲಿಷ್ಠನಾಗುತ್ತಾನೆ” ಎಂದರು.

ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ ಕೆ ಇವರ ಮಾರ್ಗದರ್ಶನದಲ್ಲಿ ಮತ್ತು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಹಭಾಗಿತ್ವದಲ್ಲಿ ಈ ಕಾರ್ಯಕ್ರಮ ನೆರವೇರಿತು.
ಈ ಸಂದರ್ಭದಲ್ಲಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಯೋಜನಾಧಿಕಾರಿ ಕೀರ್ತನ್ ಮತ್ತು ವಿಷಯಗಳ ಉಪನ್ಯಾಸಕರು ಉಪಸ್ಥಿತರಿದ್ದರು.