ಬಡಗನ್ನೂರು: ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆ ಇಲ್ಲಿನ ಹಿರಿಯ ಪ್ರಾಥಮಿಕ ಶಾಲೆಯ 2025-26ನೇ ಸಾಲಿನ ಪ್ರಥಮ ಪೋಷಕರ ಸಭೆಯು ನಡೆಯಿತು. ಈ ಸಭೆಯ ಅಧ್ಯಕ್ಷತೆಯನ್ನು ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳ ಸಂಚಾಲಕ ವಿಘ್ನೇಶ್ ಹಿರಣ್ಯ ವಹಿಸಿ ಮಾತನಾಡಿ, ಉತ್ತಮ ಶಿಕ್ಷಣವನ್ನು ನೀಡುವುದು ಮತ್ತು ಸುಸಂಸ್ಕೃತ ಸಮಾಜವನ್ನು ನಿರ್ಮಿಸುವುದರ ಜೊತೆಗೆ ವಿದ್ಯಾರ್ಥಿಗಳಿಗೆ ಪಠ್ಯೇತರ ಚಟುವಟಿಕೆಗೆ ಆದ್ಯತೆ ನಮ್ಮ ಧ್ಯೇಯ ಆಗಿದೆ ಅದಕ್ಕೆ ಪೋಷಕರೆಲ್ಲ ಸಹಕಾರವನ್ನು ನೀಡಬೇಕೆಂದರು.

ಆಡಳಿತ ಮಂಡಳಿಯ ಅಧ್ಯಕ್ಷ ಗೋಪಾಲಕೃಷ್ಣ ಭಟ್ ಮಾತನಾಡಿ, ನಮ್ಮ ಧ್ಯೇಯ ಮತ್ತು ಗುರಿ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಾಗಿದೆ ಇದಕ್ಕೆ ಪೋಷಕರೆಲ್ಲರ ಸಹಕಾರಬೇಕೆಂದು ಕೇಳಿಕೊಂಡರು. ಶ್ರೀ ಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಗುರು ರಾಜ್ ಗೋಪಾಲ ಯನ್ ಶಾಲೆಯ ಮೂಲಭೂತ ಸೌಕರ್ಯಗಳು ಮತ್ತು ಶಾಲೆಯಲ್ಲಿ ನಡೆಯುವ ದೈನಂದಿನ ಚಟುವಟಿಕೆಗಳ ಬಗ್ಗೆ ತಿಳಿಯಪಡಿಸಿದರು.
ಪ್ರಾಥಮಿಕ ವಿಭಾಗದ SDMC ಅಧ್ಯಕ್ಷ ಕೇಶವಪ್ರಸಾದ್ ಮಾತನಾಡಿ, ನಾವೆಲ್ಲರೂ ಆಡಳಿತ ಮಂಡಳಿಯ ಕೆಲಸ ಕಾರ್ಯಗಳಿಗೆ ಕೈಜೋಡಿಸಬೇಕೆಂದರು. ಪ್ರತಿಭಾ ಪ್ರೌಢಶಾಲೆಯ ಮುಖ್ಯ ಗುರು ಸುಮನಾ ಬಿ ಪ್ರಾಸ್ತವಿಕಾ ಮಾತನಾಡಿ, ಪೋಷಕರೆಲ್ಲರ ಸಹಕಾರ ನಮ್ಮ ಜೊತೆಗೆ ಇರಬೇಕೆಂದರು.
ಪ್ರಾಥಮಿಕ ವಿಭಾಗದ ಇಂಗ್ಲಿಷ್ ಶಿಕ್ಷಕಿ ಚಿತ್ರಾ ಸ್ವಾಗತಿಸಿದರು.ಕಂಪ್ಯೂಟರ್ ಶಿಕ್ಷಕಿ ಧನಲಕ್ಷ್ಮಿ ವಂದಿಸಿ, ಕನ್ನಡ ಶಿಕ್ಷಕ ರಾಮಚಂದ್ರಪ್ಪ ಕಾರ್ಯಕ್ರಮ ನಿರೂಪಿಸಿದರು. ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳ ಎಲ್ಲಾ ಶಿಕ್ಷಕರು ಉಪಸ್ಥಿತರಿದ್ದರು.