ನಾಳೆ(ಜೂ.26): ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆ – ಸಂಸ್ಥಾಪಕರ ದಿನಾಚರಣೆ ಮತ್ತು ಪುಸ್ತಕ ಬಿಡುಗಡೆ

0

ಪುತ್ತೂರು: ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ಸಂಸ್ಥಾಪಕರ ದಿನಾಚರಣೆ ಮತ್ತು ಪುಸ್ತಕ ಬಿಡುಗಡೆ ಕಾರ್ಯಕ್ರಮ ನಾಳೆ(ಜೂ.26) ಸಂಸ್ಥೆಯ ಗೋಪಾಲಕೃಷ್ಣ ಸಭಾಭವನದಲ್ಲಿ ನಡೆಯಲಿದೆ.

ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯ ಅಧ್ಯಕ್ಷ ಎಸ್ ಜಯರಾಮ್ ಕೆದಿಲಾಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಅಂಬಿಕಾ ವಿದ್ಯಾಸಂಸ್ಥೆ ಸದಸ್ಯ ಕೆ.ಸುರೇಶ್ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಸಾಂದೀಪನಿ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಸದಸ್ಯ ಎಸ್‌ ಜಿ ಕೃಷ್ಣ ಪುಸ್ತಕ ಬಿಡುಗಡೆಗೊಳಿಸಲಿದ್ದಾರೆ ಎಂದು ಸಂಸ್ಥೆಯ ಸಂಚಾಲಕ ಭಾಸ್ಕರ್ ಆಚಾರ್ ಹಿಂದಾರ್ ತಿಳಿಸಿದ್ದಾರೆ.‌

LEAVE A REPLY

Please enter your comment!
Please enter your name here