ಬೆಟ್ಟಂಪಾಡಿ: ಪ್ರಿಯದರ್ಶಿನಿ ಆಂಗ್ಲ ಮಾಧ್ಯಮ ಶಾಲೆ ವಿದ್ಯಾಗಿರಿ ಬೆಟ್ಟಂಪಾಡಿ ಇಲ್ಲಿ ವಿಶ್ವ ಯೋಗ ದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯ ಸದಸ್ಯ ಅರವಿಂದ ಭಟ್ ದರ್ಬೆ ಇವರು ಮಾತನಾಡುತ್ತಾ, ಯೋಗವು ದೈಹಿಕ ಹಾಗೂ ಮನಸ್ಸಿನ ಸಾಮರ್ಥ್ಯವನ್ನು ಗಟ್ಟಿಗೊಳಿಸುವುದಲ್ಲದೆ ನಮ್ಮನ್ನು ಉಲ್ಲಸಿತರನ್ನಾಗಿಸುತ್ತದೆ.
ಇಂದಿನ ದಿನಗಳಲ್ಲಿ ಯೋಗದ ಮುಖೇನ ನಮ್ಮ ದೈಹಿಕ ಕಾರ್ಯ ಕ್ಷಮತೆಯನ್ನು ಹೆಚ್ಚಿಸಿಕೊಳ್ಳುವ ಅನಿವಾರ್ಯತೆ ಇದೆ ಎಂದರು. ವೇದಿಕೆಯಲ್ಲಿ ಮುಖ್ಯಗುರು ರಾಜೇಶ್ ನೆಲ್ಲಿತ್ತಡ್ಕ ಉಪಸ್ಥಿತರಿದ್ದರು. ಸಹ ಶಿಕ್ಷಕಿ ಶ್ರೀಮತಿ ಗೌತಮಿ ಕಾರ್ಯಕ್ರಮ ನಿರೂಪಿಸಿದರು. ನಂತರದಲ್ಲಿ ವಿದ್ಯಾರ್ಥಿಗಳಿಂದ ಯೋಗ ಪ್ರದರ್ಶನ ನಡೆಯಿತು.