ಬಡಗನ್ನೂರು: ಸುಳ್ಯಪದವು ಸರ್ವೋದಯ ವಿದ್ಯಾ ಸಂಸ್ಥೆಗಳು ವಿಶ್ವ ಯೋಗ ದಿನಾಚರಣೆ ಆಚರಿಸಲಾಯಿತು. ಕಕ್ಕೆಬೆಟ್ಟು ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಮುಖ್ಯಗುರುಗಳಾದ ವೀಣಾಕುಮಾರಿ ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ನಿರಂತರ ಯೋಗಾಭ್ಯಾಸದಿಂದ ವ್ಯಕ್ತಿ ಉತ್ತಮವಾದ ಆರೋಗ್ಯ ಮತ್ತು ದೀರ್ಘಕಾಲ ಬದುಕಲು ಸಾಧ್ಯ ಮನುಷ್ಯನ ಜೀವನದಲ್ಲಿ ಯೋಗಾಭ್ಯಾಸವನ್ನು ಮಾಡುವುದರಿಂದ ಈ ದೇಶದಲ್ಲಿ ಸಂಸ್ಕೃತವಾಗಿ ಬದುಕುವುದರ ಜೊತೆಗೆ ಸಂಸ್ಕೃತವಾದ ಸಮಾಜವನ್ನು ನಿರ್ಮಾಣ ಮಾಡಲು ಸಾಧ್ಯ ಎಂದರು.

ಸಂಸ್ಥೆಯ ಅಧ್ಯಕ್ಷರಾದ ಶಿವರಾಮ್ ಎಚ್ ಡಿ ರವರು ಸಭಾಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳೆಲ್ಲರೂ ನಿರಂತರ ಯೋಗಾಭ್ಯಾಸದಲ್ಲಿ ತೊಡಗಿಸಿಕೊಳ್ಳಬೇಕು ಅಷ್ಟಾಂಗ ಯೋಗದ ಕ್ರಮವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಪ್ರತಿಯೊಬ್ಬ ವಿದ್ಯಾರ್ಥಿಯೂ ಮುಂದೆ ಭಾರತದ ಉತ್ತಮ ಪ್ರಜೆ ಆಗಬೇಕೆಂಬ ಕಿವಿ ಮಾತನ್ನಾಡಿದರು.
ಬಳಿಕ ವಿದ್ಯಾರ್ಥಿಗಳಿಂದ ವಿವಿಧ ಯೋಗಾಸನಗಳ ಪ್ರದರ್ಶನ ಪ್ರಾಣಯಾಮದ ಪ್ರಾತ್ಯಕ್ಷಿಕತೆ ನಡೆಯಿತು. ವೇದಿಕೆಯಲ್ಲಿ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಆನಂದ ನಾಯ್ಕ ಪಾದೆಗದ್ದೆ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕ ವೃಂದದವರು ಹಾಗೂ ಪೋಷಕರು ಮತ್ತು ಅಕ್ಷರದಾಸೋಹ ಸಿಬ್ಬಂದಿಗಳು ಪಾಲ್ಗೊಂಡರು. ಸಂಸ್ಥೆಯ ಮುಖ್ಯೋಪಾಧ್ಯಾಯರಾದ ಸುಕೇಶ್ ರೖೆ ಎನ್ ಸ್ವಾಗತಿಸಿ ಯೋಗ ದಿನದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.
ಶಿಕ್ಷಕರಾದ ಚಂದ್ರಲೇಖ ಹಾಗೂ ಕರುಣಾಕರ್ ಕಾರ್ಯಕ್ರಮವನ್ನು ನಿರೂಪಿಸಿದರು.