ಕಡಬ: ಇಲ್ಲಿನ ಪೊಲೀಸ್ ಠಾಣೆ ನೇತೃತ್ವದಲ್ಲಿ ಕಡಬ ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆ, ಪದವಿ ಪೂರ್ವ ಕಾಲೇಜು ಕಡಬ ಇವರ ಸಹಯೋಗದೊಂದಿಗೆ ಅಂತರಾಷ್ಟ್ರೀಯ ಮಾದಕ ವಸ್ತು ಸೇವನೆ ವಿರೋಧಿ ದಿನಾಚರಣೆಯನ್ನು ನಡೆಸಲಾಯಿತು.
ಪ್ರಾರಂಭದಲ್ಲಿ ಕಡಬ ಪೇಟೆಯಲ್ಲಿ ವಿದ್ಯಾರ್ಥಿಗಳ ಜಾಥಾ ನಡೆಸಲಾಯಿತು. ಬಳಿಕ ಕಡಬ ಅನುಗ್ರಹ ಸಭಾಭವನದಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಸಭೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಸುಬ್ರಹ್ಮಣ್ಯೇಶ್ವರ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಯಶವಂತ ರೈಗಳು ಮಾದಕ ವಸ್ತು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಮಾತನಾಡಿದರು.
ಕಡಬ ಠಾಣಾ ಆರಕ್ಷಕ ಉಪನಿರೀಕ್ಷಕ ಅಭಿನಂದನ್ ಎಮ್. ಅವರು ಡ್ರಗ್ಸ್, ಗಾಂಜಾ ಸೇವನೆಯಿಂದ ಆರೋಗ್ಯದ ಜತೆಗೆ ಕಾನೂನು ರೀತಿಯ ತೊಂದರೆಗಳನ್ನು ವಿವರಿಸಿದರು. ವೇದಿಕೆಯಲ್ಲಿ ಕಡಬ ಠಾಣಾ ತನಿಖಾ ಎಸ್.ಐ. ಅಕ್ಷಯ್ ಢವಗಿ, ಕಡಬ ಪ.ಪೂ.ಕಾಲೇಜಿನ ಪ್ರಾಂಶುಪಾಲ ದೇವರಾಜ್, ಕಡಬ ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯ ಪ್ರಾಂಶುಪಾಲ ಕಿರಣ್ ಕುಮಾರ್ ಉಪಸ್ಥಿತರಿದ್ದರು. ಪೊಲೀಸ್ ಕಾನ್ಸ್ಸ್ಟೇಬಲ್ ಮಹೇಶ್ ಸ್ವಾಗತಿಸಿ, ವಂದಿಸಿದರು.