ಪುತ್ತೂರು :ನೆಹರು ನಗರದ ವಿವೇಕಾನಂದ ಸೆಂಟ್ರಲ್ ಸ್ಕೂಲ್ ನಲ್ಲಿ ಜುಲೈ 26 ರಂದು ನೂತನ ಶಾಲಾ ಮಂತ್ರಿ ಮಂಡಲದ ರಚನೆ ಹಾಗೂ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನಡೆಯಿತು.

“ಶಾಲೆಯ ಶೈಕ್ಷಣಿಕ ವರ್ಷದ ಅಭಿವೃದ್ಧಿಯಲ್ಲಿ ಶಾಲಾ ಮಂತ್ರಿ ಮಂಡಲವು ಮಹತ್ತ್ವಪೂರ್ಣವಾದ ಪಾತ್ರವನ್ನು ವಹಿಸುತ್ತದೆ ಮತ್ತು ವಿದ್ಯಾರ್ಥಿಗಳಲ್ಲಿ ಉತ್ತಮ ನಾಯಕತ್ವ ಗುಣವನ್ನು ಬೆಳೆಸುತ್ತದೆ . ಒಬ್ಬ ನಾಯಕನಾದವನು ಉತ್ತಮ ಗುಣ ಮತ್ತು ಹೊಂದಾಣಿಕೆಯ ಗುಣಗಳನ್ನು ಅಳವಡಿಸಿಕೊಳ್ಳುವುದರ ಜೊತೆಗೆ ಜವಾಬ್ದಾರಿಯುತವಾಗಿ ವರ್ತಿಸುವ ಸಂಕಲ್ಪವನ್ನು ಕೈಗೊಳ್ಳಬೇಕು. ಆ ಮೂಲಕ ಉತ್ತಮ ಸಮಾಜದ ನಿರ್ಮಾಣಕ್ಕೆ ಕಾರಣಕರ್ತರಾಗುವ ನಾಯಕರಾಗಿ ನೀವು ಹೊರಹೊಮ್ಮಬೇಕು” ಎಂದು ಶಾಲಾ ಆಡಳಿತ ಮಂಡಳಿಯ ಸದಸ್ಯೆ ಪ್ರೀತಿ ಶೆಣೈಯವರು ನುಡಿದರು.
ಶಾಲಾ ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷ ರವಿಂದ್ರ ರೈ ಅವರು ವಿದ್ಯಾರ್ಥಿಗಳಿಗೆ, “ನಿಮಗೆ ಸಿಕ್ಕ ಅವಕಾಶಗಳನ್ನು ಸದುಪಯೋಗ ಪಡಿಸಿಕೊಂಡು ಉತ್ತಮ ನಾಯಕರಾಗಿ ಹೊರಹೊಮ್ಮಿ” ಎನ್ನುತ್ತಾ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಸಂಪತ್ ಕುಮಾರ್ ಅವರು ಉಪಸ್ಥಿತರಿದ್ದರು. ಶಾಲಾ ಶೈಕ್ಷಣಿಕ ಸಲಹೆಗಾರರಾದ ಅನುರಾಧ ಶಿವರಾಂ ಅವರು ಶಾಲಾ ಸಂಸತ್ತಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಬೋಧಿಸಿದರು.

ಕಾರ್ಯಕ್ರಮದಲ್ಲಿ ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ವಿದ್ಯಾರ್ಥಿಗಳಾದ ಚಿಂತನ ಎಸ್. ಭಟ್ ಸ್ವಾಗತಿಸಿ, ಅಚಿಂತ್ಯಕೃಷ್ಣ ವಂದಿಸಿದರು. ಲಾಸ್ಯಕಿಶನ್ ಮತ್ತು ಶ್ರಾವ್ಯನಾಯಕ್ ಪಿ. ನಿರೂಪಿಸಿದರು.