ಪುತ್ತೂರು: ಎಂ ಪಿ ಮತ್ತು ಎಮ್ ಎಲ್ ಎ ನ್ಯೂಸ್ ಮಾಧ್ಯಮ ಸಂಸ್ಥೆಯ ವತಿಯಿಂದ ಮಂಗಳೂರು ಪುರಭವನದಲ್ಲಿ ಜೂ.24 ರಂದು ಜರಗಿದ ಸಮಾರಂಭದಲ್ಲಿ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತರಾದ ಹಿರಿಯ ಸಹಕಾರಿ, ಬೆಂಗಳೂರು ಸುಂದರರಾಮ್ ಶೆಟ್ಟಿ ನಗರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಸ್ಥೆಯ ಅಧ್ಯಕ್ಷ ಅಗರಿ ನವೀನ್ ಭಂಡಾರಿಯವರಿಗೆ ಸೌಹಾರ್ದ ರತ್ನ ಪ್ರಶಸ್ತಿ ನೀಡಿ, ಸನ್ಮಾನಿಸಿ, ಗೌರವಿಸಲಾಯಿತು.
ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ಇಂದಾಜೆ, ಪತ್ರಕರ್ತ ಪಿ.ಬಿ.ಹರೀಶ್ ರೈ, ಎಮ್ ಪಿ & ಎಮ್ ಎಲ್ ಎ. ನ್ಸೂಸ್ ಮಾಧ್ಯಮ ಸಂಸ್ಥೆಯ ಸಂಪಾದಕ ಡಾ.ಅಶೋಕ ಶೆಟ್ಟಿ ಬಿ.ಎನ್ ಮತ್ತಿತರರು ಉಪಸ್ಥಿತರಿದ್ದರು.