ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯದಲ್ಲಿ ಪ್ರಾಯಶ್ಚಿತ ಸಂಬಂಧಿತ ವೈದಿಕ ಕಾರ್ಯ

0

ಉಪ್ಪಿನಂಗಡಿ: ಪ್ರಶ್ನಾ ಚಿಂತನೆಯಲ್ಲಿ ವ್ಯಕ್ತಗೊಂಡ ಸಲಹೆಯ ಪ್ರಕಾರ ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೆಶ್ವರ ದೇವಾಲಯದಲ್ಲಿ ಪ್ರಾಯಶ್ಚಿತ್ತ ಸಂಬಂಧಿತ ವಿವಿಧ ವೈದಿಕ ವಿಧಿ ವಿಧಾನಗಳು ಶುಕ್ರವಾರವೂ ಶ್ರೀ ದೇವಾಲಯದಲ್ಲಿ ನಡೆಯಿತು.


ಕ್ಷೇತ್ರದ ತಂತ್ರಿಗಳಾದ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಶತರುದ್ರ ಪಠಣ, ತ್ರೀಕಾಲ ಪೂಜೆ ಹಾಗೂ ಸುವಾಶಿನಿ ಪೂಜೆ ನಡೆಯಿತು. ಈ ಸಂದರ್ಭ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ. ರಾಧಾಕೃಷ್ಣ ನಾಯ್ಕ್, ಸದಸ್ಯರಾದ ಬಿ. ಕೃಷ್ಣರಾವ್ ಅರ್ತಿಲ, ಎ. ದೇವದಾಸ ರೈ, ಡಾ. ರಮ್ಯ ರಾಜಾರಾಮ್, ಅನಿತಾ ಕೇಶವ ಗೌಡ, ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಕರುಣಾಕರ ಸುವರ್ಣ ಮಾಜಿ ಸದಸ್ಯ ಕಂಗ್ವೆ ವಿಶ್ವನಾಥ ಶೆಟ್ಟಿ, ಪ್ರಧಾನ ಅರ್ಚಕ ಹರೀಶ ಉಪಾಧ್ಯಾಯ, ಪ್ರಮುಖರಾದ ಸುರೇಶ ಅತ್ರೆಮಜಲು, ವ್ಯವಸ್ಥಾಪಕ ವೆಂಕಟೇಶ ರಾವ್, ಸಿಬ್ಬಂದಿ ಕೃಷ್ಣ ಪ್ರಸಾದ್ ಬಡಿಲ, ದಿವಾಕರ ಗೌಡ,ಪದ್ಮನಾಭ ಕುಲಾಲ್, ಕೃಷ್ಣಪ್ರಸಾದ್ ದೇವಾಡಿಗ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here