ಪುತ್ತೂರು: ಇನ್ನರ್ ವ್ಹೀಲ್ ಕ್ಲಬ್, ಪುತ್ತೂರು (2025-26) ಕುರಿಯ ಗ್ರಾಮ ವಿಕಾಸ ಸಮಿತಿ, ನರೇಂದ್ರ ಪದವಿಪೂರ್ವ ಕಾಲೇಜು ತೆಂಕಿಲ, ಪ್ರಗತಿ ಎಜುಕೇಶನ್ ಟ್ರಸ್ಟ್(ರಿ), ಪುತ್ತೂರು, ನ್ಯಾಷನಲ್ ಮೆಡಿಕೋಸ್ ಆರ್ಗನೈಸೇಷನ್ ಹಾಗೂ ಕುರಿಯ ಉಳ್ಳಾಲ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಸಹಯೋಗದಲ್ಲಿ ವಿಶ್ವ ವೈದ್ಯರ ದಿನಾಚರಣೆಯ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ
(ವಿಶೇಷವಾಗಿ ಮಹಿಳೆಯರು ಹಾಗೂ ಮಕ್ಕಳು) ಜೂ.29 ರಂದು ಬೆಳಿಗ್ಗೆ ೦9.೦೦ರಿಂದ 1.30ವರೆಗೆ ಕುರಿಯ ಉಳ್ಳಾಲ ಶ್ರೀಮಹಾವಿಷ್ಣುಮೂರ್ತಿ ದೇವಸ್ಥಾನದ ವಠಾರದಲ್ಲಿ ಜರಗಲಿದೆ.
ಪುತ್ತೂರು ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಕ್ ರೈ ರವರು ಶಿಬಿರದ ಉದ್ಘಾಟನೆ ಯನ್ನು ನೇರವೇರಿಸಲಿದ್ದಾರೆ.
ಕುರಿಯ ಉಳ್ಳಾಲ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಜಯರಾಮ ರೈ ಅಡ್ಯೆತ್ತಿಮಾರುರವರು ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಕಾರ್ಯಕ್ರಮದ ಸಂಘಟಕರು ತಿಳಿಸಿದ್ದಾರೆ.