ಪುತ್ತೂರು: ಆ್ಯಕ್ಸಿಸ್ ಮ್ಯಾಕ್ಸ್ ಲೈಫ್ ಇನ್ಶೂರೆನ್ಸ್ ಸಂಸ್ಥೆಯ ವತಿಯಿಂದ ವಿವಿಧ ಸ್ತರಗಳಲ್ಲಿ ಸಾಧನೆ ಮಾಡಿರುವಂತಹ ಸಾಧಕರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಇತ್ತೀಚಿಗೆ ಮಂಗಳೂರಿನ ಅತ್ತಾವರದಲ್ಲಿರುವ ಆ್ಯಕ್ಸಿಸ್ ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು.

ಶಿಕ್ಷಣ ಕ್ಷೇತ್ರದಲ್ಲಿ ಶೈಕ್ಷಣಿಕ ಸೇವೆಯನ್ನು ಗುರುತಿಸಿ ಶಿಕ್ಷಾರತ್ನ ಪ್ರಶಸ್ತಿಗೆ ಬಾಜನರಾದ ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವೀರಮಂಗಲ ಇಲ್ಲಿಯ ಮುಖ್ಯ ಶಿಕ್ಷಕ ತಾರಾನಾಥ ಸವಣೂರು ಇವರನ್ನು ಗೌರವಿಸಲಾಯಿತು. ಸಾಮಾಜಿಕ ಕ್ಷೇತ್ರದಲ್ಲಿನ ಸೇವೆಯನ್ನು ಗುರುತಿಸಿ ಸೇವಾರತ್ನ ಪ್ರಶಸ್ತಿಗೆ ವಿದ್ಯಾಮಾತಾ ಅಕಾಡೆಮಿಯ ಮ್ಯಾನೆಜಿಂಗ್ ಡೈರೆಕ್ಟರ್ ಭಾಗ್ಯೇಶ್ ರೈ ಇವರಿಗೂ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಕಲಾಸೇವೆಯನ್ನು ಗುರುತಿಸಿ ಕಲಾಪ್ರಶಸ್ತಿಗೆ ಆಯ್ಕೆಯಾದ ವಿದ್ವಾನ್ ಗೋಪಾಲಕೃಷ್ಣ ವೀರಮಂಗಲ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಆ್ಯಕ್ಸಿಸ್ ಮ್ಯಾಕ್ಸ್ ಇನ್ಸೂರೆನ್ಸ್ ಕಂಪನಿಯ ಪದಾಧಿಕಾರಿಗಳು , ಅತಿಥಿಗಳು ಹಾಗೂ ಗ್ರಾಹಕ ವರ್ಗ ಮತ್ತು ಸಿಬಂದಿಗಳು ಹಾಜರಿದ್ದರು.