ಪಾಣಾಜೆ: ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಗ್ರಾಮ ಸಮಿತಿ ಮಹಾಸಭೆ

0

ಪಾಣಾಜೆ: ಪಾಣಾಜೆ ಗ್ರಾಮದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಗ್ರಾಮ ಸಮಿತಿ ಹಾಗೂ ಮಹಿಳಾ ವೇದಿಕೆಯ ವಾರ್ಷಿಕ ಮಹಾಸಭೆ ಹಾಗೂ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮವು ಜೂನ್ 28 ರಂದು ಶನಿವಾರ ಸಂಜೆ  ಸಂಜೆ ಆರ್ಲಪದವು ಶ್ರೀ ಸುಬ್ರಹ್ಮಣೇಶ್ವರ ಭಜನಾ ಮಂದಿರದಲ್ಲಿ ನಡೆಯಿತು.

ಪುತ್ತೂರು ತಾಲೂಕು ಬಿಲ್ಲವ ಸಂಘದ ಅಧ್ಯಕ್ಷರಾದ ಸತೀಶ್ ಕುಮಾರ್ ಕೆಡೆಂಜಿಯವರು ದೀಪ ಬೆಳಗಿಸಿ ಕಾಯಕ್ರಮಕ್ಕೆ ಚಾಲನೆ ನೀಡಿದರು. ಪಾಣಾಜೆ ಗ್ರಾಮ ಸಮಿತಿ ಅಧ್ಯಕ್ಷರಾದ ವಿಶ್ವನಾಥ ಪೂಜಾರಿ ಉಡ್ಡಂಗಳ ಅಧ್ಯಕ್ಷತೆ ವಹಿಸಿದ್ದರು. ಪುತ್ತೂರು ಬಿಲ್ಲವ ಸಂಘದ ಕಾರ್ಯದರ್ಶಿ ಚಿದಾನಂದ ಸುವರ್ಣ, ಕೋಶಾಧಿಕಾರಿಯಾದ ಬಿ.ಟಿ. ಮಹೇಶ್ಚಂದ್ರ ಸಾಲ್ಯಾನ್, ಗುರು ಮಂದಿರದ ಕಾರ್ಯನಿರ್ವಹಣಾಧಿಕಾರಿ ಉದಯ ಕುಮಾರ್ ಕೋಲಾಡಿ,  ಯುವವಾಹಿನಿ ಘಟಕದ ಅಧ್ಯಕ್ಷರಾದ ಅಣ್ಣಿ ಪೂಜಾರಿ ಬೀರ್ನಹಿತ್ತಿಲು ಹಾಗೂ ಪಾಣಾಜೆ ಬಿಲ್ಲವ ಮಹಿಳಾ ವೇದಿಕೆ ಅಧ್ಯಕ್ಷೆ ರಾಧಾ ಬೊಳ್ಳಿಂಬಳ ಉಪಸ್ಥಿತರಿದ್ದರು.

ಅತಿಥಿಗಳು ಬಿಲ್ಲವ ಸಂಘಟನೆಯ ಮಹತ್ವ, ನಾರಾಯಣ ಗುರುಗಳ ಆದರ್ಶಗಳ ಬಗ್ಗೆ ಹಾಗೂ ಸಮಾಜದಲ್ಲಿ ಮಕ್ಕಳ ಬಗ್ಗೆ ಹೆತ್ತವರ ಕಾಳಜಿ, ಮಹತ್ವ ವನ್ನು ತಿಳಿಸಿ  ಕಾರ್ಯಕ್ರಮಕ್ಕೆ ಶುಭ ಹಾರೈಸಿ 32 ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಿಸಲಾಯಿತು. ನಂತರ ಮುಂದಿನ ಮೂರು ವರ್ಷದ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ವಿಶ್ವನಾಥ ಪೂಜಾರಿ ಉಡ್ಡಂಗಳ, ಉಪಾಧ್ಯಕ್ಷರಾಗಿ ರಾಜೇಶ್ ಪೂಜಾರಿ ಆರ್ಲಪದವು, ಪ್ರಧಾನ ಕಾರ್ಯದರ್ಶಿಯಾಗಿ ಜಿ.ಎಸ್. ಹರೀಶ್ ಆರ್ಲಪದವು, ಜೊತೆ ಕಾರ್ಯದರ್ಶಿಯಾಗಿ ಯಜ್ಞೇಶ್ ಕೊಂದಲಡ್ಕ, ಕೋಶಾಧಿಕಾರಿಯಾಗಿ ಸುರೇಶ್ ಪೂಜಾರಿ ಬೊಳ್ಳಿಂಬಳ, ಮಹಿಳಾ ಘಟಕದ ನೂತನ ಪದಾಧಿಕಾರಿಗಳಾಗಿ ಅಧ್ಯಕ್ಷರಾಗಿ ರಾಧಾ ಬೊಳ್ಳಿಂಬಳ, ಉಪಾಧ್ಯಕ್ಷರಾಗಿ ಶಿಲ್ಪಾ ಕೆದಂಬಾಡಿ, ಕಾರ್ಯದರ್ಶಿಯಾಗಿ ಸುಶೀಲ ಕಡಮಾಜೆ, ಜೊತೆ ಕಾರ್ಯದರ್ಶಿಯಾಗಿ ಮಮತಾ ಬೊಳ್ಳಿಂಬಳ, ಕೋಶಾಧಿಕಾರಿಯಾಗಿ ಪುಷ್ಪಾ ಆರ್ಲಪದವು ಆಯ್ಕೆ ಮಾಡಲಾಯಿತು.

ಗ್ರಾಮ ಸಮಿತಿಯ ಎಲ್ಲಾ ಪದಾಧಿಕಾರಿಗಳು, ಸದಸ್ಯರುಗಳು ಉಪಸ್ಥಿತರಿದ್ದು, ಸಹಕರಿಸಿದರು. ಬಾಲಕೃಷ್ಣ ಪೂಜಾರಿ ಉಡ್ಡಂಗಳರವರು ಕಾರ್ಯಕ್ರಮ ನಿರೂಪಣೆಯ ಜೊತೆಗೆ ಸ್ವಾಗತಿಸಿದರು. ಪಾಣಾಜೆ ಗ್ರಾಮ ಸಮಿತಿ ಉಪಾಧ್ಯಕ್ಷ ರಾಜೇಶ್ ಪೂಜಾರಿಯವರು ಪುಸ್ತಕ ವಿತರಣೆಯ ನಿರೂಪಣೆ ಮಾಡಿದರು. ಹರೀಶ್ ಕಡಮಾಜೆ ಧನ್ಯವಾದಗೈದರು. ಗ್ರಾಮ ಸಮಿತಿಯ ಪ್ರಧಾನ ಕಾರ್ಯದರ್ಶಿ ಜಿ. ಎಸ್. ಹರೀಶ್ ಆರ್ಲಪದವು ಸಹಕರಿಸಿದರು.

LEAVE A REPLY

Please enter your comment!
Please enter your name here