ಕೆಂಪು ಕಲ್ಲು ಪಾಯ ಬಂದ್: ಜು.3ಕ್ಕೆ ಬೃಹತ್ ಪ್ರತಿಭಟನೆಗೆ ನಿರ್ಧಾರ

0

ಉಪ್ಪಿನಂಗಡಿ: ಪೊಲೀಸ್ ಇಲಾಖೆಯ ಕಟ್ಟುನಿಟ್ಟಿನ ಕ್ರಮದಿಂದಾಗಿ ದ.ಕ. ಜಿಲ್ಲೆಯಲ್ಲಿ ಕೆಂಪು ಕಲ್ಲು ಪಾಯಗಳು ಬಂದ್ ಆಗಿದ್ದು, ಇದಕ್ಕೆ ಪರಿಹಾರ ಕಲ್ಪಿಸದಿದ್ದಲ್ಲಿ ಜು.3ರಂದು ಬೃಹತ್ ಪ್ರತಿಭಟನೆ ನಡೆಸಲು ದ.ಕ. ಜಿಲ್ಲಾ ಕೆಂಪು ಕಲ್ಲು ಪಾಯ ಹಾಗೂ ಲಾರಿ ಮಾಲಕರ ಒಕ್ಕೂಟವು ನಿರ್ಧರಿಸಿದೆ.


ಈ ಬಗ್ಗೆ ಒಕ್ಕೂಟವು ಬಿ.ಸಿ.ರೋಡಿನ ಖಾಸಗಿ ಸಭಾಂಗಣವೊಂದರಲ್ಲಿ ಸಭೆ ನಡೆಸಿ ಚರ್ಚಿಸಿದ್ದು, ಜೂ.30ರಂದು ನಡೆಯಲಿರುವ ಕೆಡಿಪಿ ಸಭೆಯಲ್ಲಿ ಈ ಸಮಸ್ಯೆಗೆ ಪರಿಹಾರ ಸಿಗದಿದ್ದಲ್ಲಿ ಮುಂದಕ್ಕೆ ರಾಜಕೀಯ ರಹಿತವಾಗಿ ಹೋರಾಟ ನಡೆಸಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು. ಪ್ರತಿಭಟನೆಯಲ್ಲಿ ಕನಿಷ್ಠ ಹತ್ತು ಸಾವಿರ ಮಂದಿ ಭಾಗಿಯಾಗುವಂತೆ ಮಾಡುವ ನಿಟ್ಟಿನಲ್ಲಿ ವಲಯವಾರು ಸಭೆಗಳನ್ನು ನಡೆಸುವುದು. ಅನಿವಾರ್ಯವಾದರೆ ಉಪವಾಸ ಸತ್ಯಾಗ್ರಹ ನಡೆಸುವುದು. ಅಗತ್ಯ ಬಿದ್ದರೆ ಹೈಕೋರ್ಟ್‌ಗೂ ಮೊರೆ ಹೋಗುವ ಬಗ್ಗೆ ಸಭೆಯಲ್ಲಿ ತಿರ್ಮಾನ ಕೈಗೊಳ್ಳಲಾಗಿದೆ ಎಂದು ಸಭೆಯ ಅಧ್ಯಕ್ಷತೆ ವಹಿಸಿದ್ದ ಕೆಂಪುಕಲ್ಲು ಪಾಯ ಹಾಗೂ ಲಾರಿ ಮಾಲಕರ ಒಕ್ಕೂಟದ ಜಿಲ್ಲಾಧ್ಯಕ್ಷ ಸತೀಶ್ ಆಚಾರ್ಯ ತಿಳಿಸಿದರು.

LEAVE A REPLY

Please enter your comment!
Please enter your name here