ಶಿರಾಡಿ: ಪರಿಸರ ಮಾಹಿತಿ ಕಾರ್ಯಕ್ರಮ

0

ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಕಡಬ ತಾಲೂಕು ನೆಲ್ಯಾಡಿ ವಲಯದ ಶಿರಾಡಿ ಒಕ್ಕೂಟದ ವತಿಯಿಂದ ಪರಿಸರ ಮಾಹಿತಿ ಕಾರ್ಯಕ್ರಮ ಶಿರಾಡಿ ಶ್ರೀ ಧರ್ಮಶಾಸ್ತ ಭಜನಾ ಮಂದಿರ ಮತ್ತು ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನಡೆಯಿತು.

ನೆಲ್ಯಾಡಿ ವಲಯದ ಮೇಲ್ವಿಚಾರಕರಾದ ಆನಂದ ಡಿ.ಬಿ.ಪರಿಸರದ ಬಗ್ಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶಿರಾಡಿ ಒಕ್ಕೂಟದ ಅಧ್ಯಕ್ಷರಾದ ಸುಕುಮಾರ್ ಕೆ.ಆರ್., ಒಕ್ಕೂಟದ ಕಾರ್ಯದರ್ಶಿ ಗ್ರೇಸಿ ಚಾಕೋಚನ್ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು. ಒಕ್ಕೂಟದ ಎಲ್ಲಾ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಮಾಹಿತಿಯ ನಂತರ ಅಯ್ಯಪ್ಪ ದೇವಸ್ಥಾನದ ಬಳಿ ಗಿಡ ನೆಡುವ ಕಾರ್ಯಕ್ರಮ ಮತ್ತು ಸಭೆಯಲ್ಲಿ ಉಪಸ್ಥಿತರಿದ್ದ ಎಲ್ಲಾ ಸದಸ್ಯರುಗಳಿಗೆ ಗಿಡಗಳನ್ನು ನೀಡಲಾಯಿತು. ಶಿರಾಡಿ ಒಕ್ಕೂಟದ ಸೇವಾ ಪ್ರತಿನಿಧಿ ಸುಮಿತ್ರ ಶ್ರೀಧರ್ ಗೌಡ ಕಾರ್ಯಕ್ರಮ ನಿರೂಪಿಸಿದರು. ಸ್ನೇಹ ತಂಡದ ಸದಸ್ಯೆ ರೇಖಾ ವಂದಿಸಿದರು.

LEAVE A REPLY

Please enter your comment!
Please enter your name here