ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಆಡಳಿತ ವೈದ್ಯಾಧಿಕಾರಿ ಆಶಾಜ್ಯೋತಿ ಅಧ್ಯಕ್ಷತೆಯಲ್ಲಿ, ವಿಕಲ ಚೇತನರ ನೋಡೆಲ್ ಅಧಿಕಾರಿ ವನಿತಾ ಹಾಗೂ ತಾಲೂಕು ಅರೋಗ್ಯ ಅಧಿಕಾರಿ ಡಾ. ದೀಪಕ್ ರೈ ರವರ ಮಾರ್ಗದರ್ಶನದಲ್ಲಿ ಹಾಗೂ ಪುತ್ತೂರು ತಾಲೂಕು ಪಂಚಾಯತ್ ವಿಕಲ ಚೇತನರ ಬಹುಮಟ್ಟದ ಪುನರ್ ವಸತಿ ಕಾರ್ಯಕರ್ತರಾದ ನವೀನ್ ಕುಮಾರ್ ಉಪಸ್ಥಿತಿಯಲ್ಲಿ, ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಯುಡಿಐಡಿ ಮನೋರೋಗ ವಿಕಲಚೇತನರ ಪ್ರಮಾಣ ಪತ್ರ ನಡೆಯಿತು.
ಶಿಬಿರದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗದ ಮಾನಸಿಕ ತಜ್ಞರಾದ ಪ್ರಜಕ್ತ ರವರು ನಡೆಸಿಕೊಟ್ಟರು. ಮಾನಸಿಕ ಅರೋಗ್ಯ ವಿಭಾಗದ ಸಿಬ್ಬಂದಿಗಳು, ಪುತ್ತೂರು ಹಾಗೂ ಕಡಬ ತಾಲೂಕಿನ ಎಲ್ಲಾ ಗ್ರಾಮೀಣ ಹಾಗೂ ನಗರ ಪುನರ್ ವಸತಿ ಕಾರ್ಯಕರ್ತರು ಮಾನಸಿಕ ವಿಕಲ ಚೇತನರ ಪ್ರಮಾಣ ಶಿಬಿರದಲ್ಲಿ ಉತ್ತಮ ಸಹಕಾರ ನೀಡಿದರು.