ಕನ್ನಡದ ಕಟ್ಟಾಳು ಸೀತಾರಾಮ ರೈ ಬನ್ನೂರು ನಿಧನ

0

ಪುತ್ತೂರು: ಕನ್ನಡದ ಕಟ್ಟಾಳು ಬನ್ನೂರು ನಿವಾಸಿ ಸೀತಾರಾಮ ರೈ ಬನ್ನೂರು(76ವ)ರವರು ಜು.15 ರಂದು ನಿಧನರಾದರು.


ಕನ್ನಡ ರಾಜ್ಯೋತ್ಸವ ಸಹಿತ ಹಲವಾರು ಕಾರ್ಯಕ್ರಮಗಳಲ್ಲಿ ಸಕ್ರೀಯರಾಗಿ ಭಾಗವಹಿಸುತ್ತಿದ್ದ ಸೀತಾರಾಮ ರೈ ಬನ್ನೂರು ಅವರು ಹೃದಯಾಘಾತಕ್ಕೊಳಗಾಗಿ ಹಲವು ದಿನಗಳ ಹಿಂದೆ ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂಧಿಸದೆ ಮೃತಪಟ್ಟಿದ್ದಾರೆ.

ಮೃತರು ಪುತ್ರಿ ರೋಜಾ, ಪುತ್ರರಾದ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರೋಶನ್ ರೈ ಬನ್ನೂರು, ಜ್ಯೂಸ್ ಸೆಂಟರ್‌ನ ಮಾಲಕ ರೋಹಿತ್ ರೈ, ಇಬ್ಬರು ಸೊಸೆಯಂದಿರು, ಅಳಿಯ, ಮೊಮ್ಮಕ್ಕಳನ್ನು ಅಗಲಿದ್ದಾರೆ.

ನಾಳೆ ಜು.16ಕ್ಕೆ ಬೆಳಗ್ಗೆ ಗಂಟೆ 8ಕ್ಕೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

LEAVE A REPLY

Please enter your comment!
Please enter your name here