ಬಡಗನ್ನೂರು: ಪಡುಮಲೆ ಮದಕ ಶ್ರೀ ರಾಜರಾಜೇಶ್ವರೀ ಕ್ಷೇತ್ರದಲ್ಲಿ ಸಂಕ್ರಮಣ ಅಂಗವಾಗಿ ಜು.16 ಬೆಳಗ್ಗೆ ಶ್ರೀ ದೇವಿಗೆ ವಿಶೇಷ ಮಹಾಪೂಜೆ ನಡೆಯಿತು.
ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದ ಪ್ರಧಾನ ಅರ್ಚಕ ಮಹಾಲಿಂಗ ಭಟ್ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು.
ಈ ಸಂಧರ್ಭದಲ್ಲಿ ನವರಾತ್ರಿ ಉತ್ಸವ ಸಮಿತಿ ಅಧ್ಯಕ್ಷ ಚಂದ್ರಶೇಖರ ಆಳ್ವ ಗಿರಿಮನೆ, ದೇವಸ್ಥಾನದ ಉತ್ಸವ ಸಮಿತಿ ಮಾಜಿ ಅಧ್ಯಕ್ಷ ಬಸವಹಿತ್ತಿಲು, ಹಾಗೂ ಪಡುಮಲೆ ಶ್ರೀ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಸದಸ್ಯರು ನವರಾತ್ರಿ ಉತ್ಸವ ಸಮಿತಿ ಪದಾಧಿಕಾರಿಗಳು, ಸದಸ್ಯರು ಮತ್ತು ಊರ ಭಕ್ತಾದಿಗಳು ಉಪಸ್ಥಿತರಿದ್ದರು.
