ಕಾಣಿಯೂರು: ಪಡುಕುತ್ಯಾರು ಆನೆಗುಂದಿ ಸರಸ್ವತಿ ಸತ್ಸಂಗ ಮಂದಿರದಲ್ಲಿ ಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿಯವರ 21ನೇ ವರ್ಷದ ಚಾತುರ್ಮಾಸ್ಯ ಪ್ರಯುಕ್ತ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ 616ಅಂಕ ಪಡೆದ ಜ್ಯೋತ್ಸ್ನಾಶ್ರೀ ಅಬೀರ ಅವರನ್ನು ಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿಯವರು ಸನ್ಮಾನಿಸಿದರು. ಜ್ಯೋತ್ಸ್ನಾಶ್ರೀ ಜಿಲ್ಲಾ ವಿಶ್ವಕರ್ಮ ಹಿತರಕ್ಷಣಾ ಸಂಘದ ಗೌರವಾಧ್ಯಕ್ಷ ಜನಾರ್ದನ ಆಚಾರ್ಯ ಕಾಣಿಯೂರು ಮತ್ತು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಪ್ರಮೀಳಾ ಜನಾರ್ದನರವರ ಪುತ್ರಿ.
