






ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಗಣಿತಶಾಸ್ತ್ರ ವಿಭಾಗದ ಕಾರ್ಯಾಗಾರ ನಡೆಯಿತು. ಪ್ರೊಫೆಸರ್ ಹರಿಪ್ರಸಾದ್ ಇವರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ಕಾರ್ಯಾಗಾರ ನಡೆಸಿಕೊಟ್ಟರು.


ಕಾಲೇಜಿನ ಪ್ರಾಂಶುಪಾಲರಾದ ದೇವಿಚರಣ್ ರೈ ಎಂ. ಉಪಸ್ಥಿತರಿದ್ದರು. ಕಾರ್ಯಾಗಾರದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜು, ನರೇಂದ್ರ ಪದವಿಪೂರ್ವ ಕಾಲೇಜು ಹಾಗೂ ಶ್ರೀರಾಮ ಪದವಿಪೂರ್ವ ಕಾಲೇಜು, ಕಲ್ಲಡ್ಕ ಇಲ್ಲಿನ ಗಣಿತಶಾಸ್ತ್ರ ವಿಭಾಗದ ಉಪನ್ಯಾಸಕರು ಪಾಲ್ಗೊಂಡರು. ವಿವೇಕಾನಂದ ಪದವಿಪೂರ್ವ ಕಾಲೇಜಿನ ಗಣಿತಶಾಸ್ತ್ರ ವಿಭಾಗ ಮುಖ್ಯಸ್ಥರಾದ ಕವಿತಾ ಕಾರ್ಯಕ್ರಮ ನಿರ್ವಹಿಸಿದರು.













