ಪುತ್ತೂರು: ಸರ್ವೆ ಗ್ರಾಮದ ಎಲಿಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಮತ್ತು ಶ್ರೀ ವರಮಹಾಲಕ್ಷ್ಮಿ ಪೂಜಾ ಮಹಿಳಾ ಸಮಿತಿ ಇದರ ಜಂಟಿ ಆಶ್ರಯದಲ್ಲಿ ಶ್ರೀವರಮಹಾಲಕ್ಷ್ಮೀ ಪೂಜೆ ಆ.8 ರಂದು ಬೆಳಿಗ್ಗೆ ಎಲಿಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಜರಗಲಿದೆ.
ಅರ್ಚಕ ಸುಬ್ರಾಯ ನಿಡ್ವಣ್ಣಾಯ ಬಂಬಿಲರವರ ನೇತೃತ್ವದಲ್ಲಿ ಬೆಳಿಗ್ಗೆ 10ಕ್ಕೆ ಶ್ರೀ ವರಮಹಾಲಕ್ಷ್ಮೀ ಪೂಜೆ ಆರಂಭಗೊಳ್ಳಲಿದ್ದು, ಮಧ್ಯಾಹ್ನ ಮಂಗಳಾರತಿ ನಡೆಯಲಿದೆ. ದೇವಳದ ಪ್ರಧಾನ ಅರ್ಚಕರಾದ ಎಲಿಯ ನಾಗೇಶ ಕಣ್ಣಾರಾಯರವರ ನೇತೃತ್ವದಲ್ಲಿ ಮಧ್ಯಾಹ್ನ ಎಲಿಯ ಶ್ರೀ ವಿಷ್ಣುಮೂರ್ತಿ ದೇವರಿಗೆ ಮಹಾಪೂಜೆ ನಡೆದು ಪ್ರಸಾದ ವಿತರಣೆಯ ಬಳಿಕ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನಡೆಯಲಿದೆ ಎಂದು ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು ಮತ್ತು ಸರ್ವ ಸದಸ್ಯರುಗಳು, ಶ್ರೀ ವರಮಹಾಲಕ್ಷ್ಮೀ ಪೂಜಾ ಮಹಿಳಾ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರುಗಳ ಪ್ರಕಟಣೆ ತಿಳಿಸಿದೆ.