ಪುತ್ತೂರು : ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಆ. 9ರಂದು ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಜರುಗಿದ ಪುತ್ತೂರು ತಾಲೂಕು ಮಟ್ಟದ ಚೆಸ್ ಸ್ಪರ್ಧೆಯಲ್ಲಿ 14ರ ವಯೋಮಾನದ ಬಾಲಕರ ವಿಭಾಗದಲ್ಲಿ ಭಾಗವಹಿಸಿರುವ ಪುರುಷರಕಟ್ಟೆ ಸರಸ್ವತಿ ವಿದ್ಯಾ ಮಂದಿರದ 6ನೇ ತರಗತಿಯ ವಿದ್ಯಾರ್ಥಿ ತೇಜಸ್ ಚತುರ್ಥ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಇವರು ಎಲಿಕ ನಿವಾಸಿ ಯಶವಂತ್ ವೈ ಮತ್ತು ರೇಖಾ ನಾಯಕ್ ಇವರ ಪುತ್ರ.