ಕಡಬ: ಕೊಯಿಲ ಗ್ರಾಮದ ಸಬಳೂರು ಅಂಗನವಾಡಿ ಕೇಂದ್ರದಲ್ಲಿ 79ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಹಿರಿಯರಾದ ಕೊರಗಪ್ಪ ಗೌಡ ಕಡೆಂಬ್ಯಾಲು ನೆರವೇರಿಸಿದರು.
ಸಬಳೂರು ಸರ್ಕಾರಿ ಉ.ಹಿ.ಪ್ರಾ.ಶಾಲಾ ಎಸ್ಡಿಎಂಸಿ ಅಧ್ಯಕ್ಷ ಶೇಖರ ಗೌಡ ಕೊಲ್ಯ, ಉಪಾಧ್ಯಕ್ಷೆ ರಮಿತಾ, ಶಿಕ್ಷಕ ವೆಂಕಟೇಶ್, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಣೇಶ್ ಎರ್ಮಡ್ಕ, ಅಂಗನವಾಡಿ ಕೇಂದ್ರದ ಬಾಲವಿಕಾಸ ಸಮಿತಿ ಪದಾಧಿಕಾರಿಗಳು, ಪೋಷಕರು ಉಪಸ್ಥಿತರಿದ್ದರು. ಅಂಗನವಾಡಿ ಶಿಕ್ಷಕಿ ಮೀನಾಕ್ಷಿ ಸಬಳೂರು ಸ್ವಾಗತಿಸಿ, ವಂದಿಸಿದರು. ಸಹಾಯಕಿ ಮೀನಾಕ್ಷಿ ಸಹಕರಿಸಿದರು.