ಅರಿಯಡ್ಕ: ಶ್ರೀ ಕೃಷ್ಣ ಭಜನಾ ಮಂದಿರ ರಿ ಕೌಡಿಚ್ಚಾರು ಅರಿಯಡ್ಕ ಇದರ ವತಿಯಿಂದ ಆ.15ರಂದು ಶ್ರೀ ಕೃಷ್ಣ ಜನ್ಮಾಷ್ಟಮಿ ವಿಜೃಂಭಣೆಯಿಂದ ನಡೆಯಿತು.
ಶಾಲಾ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮೊಸರು ಕುಡಿಕೆ, ಮಡಿಕೆ ಒಡೆಯುವ ಸ್ಪರ್ಧೆ, ಮುಂತಾದ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಮುದ್ದುಕೃಷ್ಣ-ರಾಧೆ ಸ್ಪರ್ಧೆ ಗಮನ ಸೆಳೆಯಿತು. ಸಂಜೆ ಸ್ವಾಮಿ ಕೊರಗಜ್ಜ ಕುಣಿತ ಭಜನಾ ತಂಡ ಪಾಪೆಮಜಲು ಇವರಿಂದ ಕುಣಿತ ಭಜನೆ ಮತ್ತು ಶ್ರೀ ಕೃಷ್ಣ ಭಜನಾ ಮಂದಿರದ ವತಿಯಿಂದ ಚಂದ್ರೋದಯ ತನಕ ಭಜನಾ ಸಂಕೀರ್ತನೆ ನಡೆಯಿತು. ಕಾರ್ಯಕ್ರಮದಲ್ಲಿ ಭಜನಾ ಮಂದಿರದ ಅಧ್ಯಕ್ಷ ರಾಮದಾಸ ರೈ ಮದ್ಲ, ಗೌರವಾಧ್ಯಕ್ಷ ವಾಸು ಪೂಜಾರಿ ಗುಂಡ್ಯಡ್ಕ, ಪ್ರಧಾನ ಕಾರ್ಯದರ್ಶಿ ದೀಪಕ್ ಕುಲಾಲ್ ಆಕಾಯಿ, ಭಜನಾ ಸಂಕೀರ್ತನೆ ಸಮಿತಿ ಅಧ್ಯಕ್ಷ ಪೂವಪ್ಪ ನಾಯ್ಕ ಕುತ್ಯಾಡಿ, ಗೌರವಾಧ್ಯಕ್ಷ ಸದಾಶಿವ ಮಣಿಯಾಣಿ ಕುತ್ಯಾಡಿ, ಪ್ರಧಾನ ಕಾರ್ಯದರ್ಶಿ ಪ್ರತೀಕ್ ಆಕಾಯಿ ಸಹಿತ ಮಂದಿರದ ಸದಸ್ಯರು, ಸಾರ್ವಜನಿಕ ಭಕ್ತಾದಿಗಳು ಉಪಸ್ಥಿತರಿದ್ದರು.