




ಪುತ್ತೂರು: ಕಡಬ ತಾಲೂಕಿನ, ಸವಣೂರು ಇಲ್ಲಿ ನಡೆದ ತಾಲೂಕುಮಟ್ಟದ ದಸರಾ ಕ್ರೀಡಾಕೂಟದ ಥ್ರೋಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದಿರುತ್ತದೆ. ಈ ಪಂದ್ಯಾಟದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ಕೌಶಿಕ್, ಮಹೇಶ್, ವಿಖ್ಯಾತ್, ಶ್ರೀರಾಮ್ ಎ, ಚರಣ್ ಎ.ವಿ, ಯಶಸ್ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಚೇತನ್ ಕುಮಾರ್, ತನ್ವಿತ್ ಎಸ್. ಇವರು ಭಾಗವಹಿಸಿದ್ದರು. ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ವಿ ಎಸ್.ಡಾ. ಜ್ಯೋತಿ ಕುಮಾರಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತದೆ. ಇವರನ್ನು ಕಾಲೇಜಿನ ಆಡಳಿತಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ, ಉಪನ್ಯಾಸಕೇತರ ವೃಂದದವವರು ಅಭಿನಂದಿಸಿರುತ್ತಾರೆ.












