




ನಿಡ್ಪಳ್ಳಿ; ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಹಾಗೂ ದ.ಕ.ಜಿ.ಪ ಮಾದರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಪಾಣಾಜೆ ಇದರ ಸಂಯುಕ್ತ ಆಶ್ರಯದಲ್ಲಿ ಸೆ.3 ರಂದು ಪಾಣಾಜೆಯಲ್ಲಿ ಜರಗಿದ ಪುತ್ತೂರು ಗ್ರಾಮಾಂತರ ವಲಯ ಮಟ್ಟದ 14ರ ವಯೋಮಾನದ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಸುಬೋಧ ಪ್ರೌಢಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ ಪಡೆದಿದೆ ಎಂದು ಶಾಲಾ ಸಂಚಾಲಕ ಮಹಾಬಲೇಶ್ವರ ಭಟ್ ಗಿಳಿಯಾಲು ತಿಳಿಸಿದ್ದಾರೆ. ದೈಹಿಕ ಶಿಕ್ಷಣ ಶಿಕ್ಷಕ ಸುಧೀರ್ ಎಸ್ ಪಿ ವಿಜೇತ ತಂಡಕ್ಕೆ ತರಬೇತಿ ನೀಡಿದ್ದಾರೆ.











