ಬಡಗನ್ನೂರು: ಕರ್ನಾಟಕ ಸರಕಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಪಶುಪಾಲನಾ ಮತ್ತು ಪಶು ವೈದಕೀಯ ಸೇವಾ ಇಲಾಖೆ ಪುತ್ತೂರು, ಪ್ರಾಥಮಿಕ ಪಶು ಚಿಕಿತ್ಸಾ ಕೇಂದ್ರ ಈಶ್ವರಮಂಗಲ ಮತ್ತು ಗ್ರಾಮ ಪಂಚಾಯತ್ ಬಡಗನ್ನೂರು ಇದರ ಸಹಯೋಗದಲ್ಲಿ ಬಡಗನ್ನೂರು ಹಾಗೂ ಪಡುವನ್ನೂರು ಗ್ರಾಮಗಳ ವ್ಯಾಪ್ತಿಯಲ್ಲಿ ನಾಯಿಗಳಿಗೆ ಉಚಿತ ರೇಬಿಸ್ ರೋಗ ನಿರೋಧಕ ಲಸಿಕಾ ಕಾರ್ಯಕ್ರಮ ಸೆ.6 ರಂದು ಬೆಳಿಗ್ಗೆ ಗಂ 9.30 ರಿಂದ 1ರ ತನಕ ಬಡಗನ್ನೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಉದ್ಘಾಟನೆಗೊಂಡು ಬಳಿಕ ನಾಲ್ಕು ತಂಡಗಳಾಗಿ ರಚನೆ ಮಾಡಿಕೊಂಡು ಗ್ರಾಮದ ಎಲ್ಲಾ ಭಾಗಗಳಲ್ಲಿ ಒಂದೇ ದಿವಸದಲ್ಲಿ ಪೂರ್ಣಗೊಳಿಸಲಾಗುವುದು. ಈ ನಿಟ್ಟಿನಲ್ಲಿ ಸಾರ್ವಜನಿಕರು ಆಯ್ದ ಸ್ಥಳಗಳಲ್ಲಿ ತಮ್ಮ ನಾಯಿಗಳನ್ನು ತಂದು ನಾಯಿಗಳಿಗೆ ಲಸಿಕೆ ನೀಡಿಸಿ ರೇಬಿಸ್ ರೋಗದ ನಿರ್ಮೂಲನೆಗೆ ಸಹಕರಿಸುವಂತೆ ಕೊಳ್ಳಿಗೆ ಪಶು ಚಿಕಿತ್ಸಾಲಯದ ಹಿರಿಯ ಪಶು ವೈದ್ಯಾಧಿಕಾರಿ ಡಾ ಎಂ.ಪಿ ಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.