ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ವಿವೇಕಾನಂದ ಕ.ಮಾ. ಶಾಲಾ ತಂಡಗಳು ತಾಲೂಕು ಮಟ್ಟಕ್ಕೆಆಯ್ಕೆ

0

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಇವರ ಆಶ್ರಯದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಬಲ್ನಾಡು ಮತ್ತು ಅಂಬೇಡ್ಕರ್ ವಸತಿ ಶಾಲೆ ಉಪ್ಪಿನಂಗಡಿ ಇದರ ಆಶ್ರಯದಲ್ಲಿ ನಡೆದ 14ರ ವಯೋಮಾನದ ಬಾಲಕ-ಬಾಲಕಿಯರ ವಲಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ ಮತ್ತು ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದೆ. ಇವರಿಗೆ ಶಾಲಾ ದೈಹಿಕ ಶಿಕ್ಷಕರುಗಳಾದ ದಾಮೋದರ್, ಹರಿಣಾಕ್ಷಿ, ಅಶ್ವಿತಾ ತರಬೇತಿ ನೀಡಿದ್ದರು.

LEAVE A REPLY

Please enter your comment!
Please enter your name here