ಪುತ್ತೂರು: ಬನ್ನೂರು ಕೃಷ್ಣನಗರ ಅಲುಂಬುಡದಲ್ಲಿರುವ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಓಣಂ ಹಬ್ಬವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು. ಪುತ್ತೂರು ಮಹಾಲಿಂಗೇಶ್ವರ ಐಟಿಐನ ನಿವೃತ್ತ ಪ್ರಾಂಶುಪಾಲ ಭವಾನಿ ಶಂಕರ್ ಪರಂಗಾಜೆ ಓಣಂ ಆಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಕಬಕ ಸರಕಾರಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲೆ ಪ್ರೇಮಲತಾ ರೈ, ಶಾಲಾ ಆಡಳಿತ ಸಮಿತಿಯ ಅಧ್ಯಕ್ಷ ವೆಂಕಟರಮಣ ಗೌಡ ಕಳುವಾಜೆ, ಸಂಚಾಲಕರಾದ ಎ. ವಿ ನಾರಾಯಣ, ಉಪಾಧ್ಯಕ್ಷ ಉಮೇಶ್ ಮಳುವೇಳು, ಕಾರ್ಯದರ್ಶಿ ಹಾಗೂ ಆಡಳಿತಾಧಿಕಾರಿ ಗುಡ್ಡಪ್ಪ ಗೌಡ ಬಲ್ಯ, ಶಾಲಾ ನಿರ್ದೇಶಕರುಗಳಾದ ಪುಷ್ಪಾವತಿ ಕಳುವಾಜೆ, ಪ್ರತಿಭಾ ದೇವಿ, ಸೀತಾರಾಮ ಕೇವಳ, ಗಂಗಾಧರ ಗೌಡ ಅಲುಂಬುಡ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಸೌಮ್ಯಶ್ರೀ ಹೆಗ್ಡೆ, ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.