ಪುತ್ತೂರು: ಉಪ್ಪಿನಂಗಡಿ ಬ್ಯಾಂಕ್ ರಸ್ತೆಯ ಕಾಮತ್ ಕಟ್ಟಡದ ಪ್ರಥಮ ಮಹಡಿಯಲ್ಲಿ ಕಾರ್ಯಾಚರಿಸುತ್ತಿರುವ ಉಪ್ಪಿನಂಗಡಿ ಕಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆಯು ಸೆ.14 ರಂದು ಪೂರ್ವಾಹ್ನ ಉಪ್ಪಿನಂಗಡಿ ದೀನರ ಕನ್ಯಾಮಾತಾ ದೇವಾಲಯದ ಸಭಾಂಗಣದಲ್ಲಿ ಸಂಘದ ಅಧ್ಯಕ್ಷರಾದ ಜೋಸೆಫ್ ವಿ.ಎಂ.ರವರ ಅಧ್ಯಕ್ಷತೆಯಲ್ಲಿ ಜರಗಲಿರುವುದು. ಸಂಘದ ಸದಸ್ಯರು ಮಹಾಸಭೆಗೆ ಹಾಜರಾಗಿ ಸಂಘದ ಅಭಿವೃದ್ಧಿಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಬೇಕಾಗಿ ಸಂಘದ ಕಾರ್ಯದರ್ಶಿ ಲ್ಯಾನ್ಸಿ ಡಿ’ಸೋಜರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.