ರಾಮಕುಂಜ: ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಂಟ್ರ ಮರ್ದಾಳ ಇವರ ಸಂಯುಕ್ತ ಆಶ್ರಯದಲ್ಲಿ ಸೆ.10ರಂದು ನಡೆದ ಕಡಬ ವಲಯ ಮಟ್ಟದ 14ರ ವಯೋಮಾನದ ಬಾಲಕ-ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯ 14ರ ವಯೋಮಾನದ ಬಾಲಕರ ತಂಡವು ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದೆ.
8ನೇ ತರಗತಿಯ ಚಿನ್ಮಯಿ ಗೌಡ ಅವರು ಸರ್ವಾಂಗಿಣ ಆಟಗಾರ ಪ್ರಶಸ್ತಿ ಪಡೆದಿದ್ದಾರೆ. ಇವರಿಗೆ ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈ ಯವರ ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರೇಮಾ ಬಿ, ದಿವ್ಯ ಪಿ.ಎನ್, ರಾಘವ ತರಬೇತಿ ನೀಡಿದ್ದರು. ಸಂಸ್ಥೆಯ ಆಡಳಿತಾಧಿಕಾರಿ ಆನಂದ ಎಸ್.ಟಿ., ವ್ಯವಸ್ಥಾಪಕ ರಮೇಶ್ ರೈ ಆರ್.ಬಿ., ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಗಾಯತ್ರಿ ಯು.ಎನ್., ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಲೋಹಿತಾ ಎ, ಶಿಕ್ಷಕ-ಶಿಕ್ಷಕೇತರ ವೃಂದದವರು ಶುಭ ಹಾರೈಸಿದ್ದಾರೆ.