ಪುತ್ತೂರು: ಕರ್ನಾಟಕ ಸರ್ಕಾರ, ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಹಾಸನ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಹಾಸನ ಇದರ ಸಹಯೋಗದಲ್ಲಿ ಸೆ.13 ಮತ್ತು 14ರಂದು ಹಾಸನ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾ ಕೂಟ 2025 – 26’ ಈಜು ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ದಿಗಂತ್ ವಿ. ಎಸ್ 100ಮೀ, 200ಮೀ ಬ್ಯಾಕ್ ಸ್ಟ್ರೋಕ್, 200 ವೈಯಕ್ತಿಕ ಮೆಡ್ಲೆ, 100ಮೀ ಫ್ರೀ ಸ್ಟೈಲ್ ಮತ್ತು 4×100 ಫ್ರೀ ಸ್ಟೈಲ್ ರಿಲೇ ವಿಭಾಗದಲ್ಲಿ ಚಿನ್ನದ ಪದಕವನ್ನು ಪಡೆದುಕೊಂಡು ಮೈಸೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ.
ಇವರು ಕೂರ್ನಡ್ಕ ನಿವಾಸಿ ವಿಶ್ವನಾಥ್ ಮತ್ತು ವೀಣಾ ಕುಮಾರಿ ದಂಪತಿಗಳ ಪುತ್ರ. ಇವರಿಗೆ ಪಾರ್ಥ ವಾರಣಾಸಿ ತರಬೇತಿ ನೀಡಿರುತ್ತಾರೆ. ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ಏಲಿಯಾಸ್ ಪಿಂಟೋ ಹಾಗೂ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.