ಆಲಂಕಾರು :ಶಾಂತಿನಿಕೇತನ ಪಬ್ಲಿಕ್ ಸ್ಕೂಲ್, ಬೆಳಗಾವಿ ಇಲ್ಲಿ ನಡೆದ ವಿದ್ಯಾಭಾರತಿ ಪ್ರಾಂತ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ 14ರ ವಯೋಮಾನದ ಬಾಲಕರ ವಿಭಾಗದಲ್ಲಿ ಭಾರತಿ ಹಿರಿಯ ಪ್ರಾಥಮಿಕ ಶಾಲೆ ಆಲಂಕಾರಿನ, ಡಿವಿನ್ ಕುಮಾರ್ ಮಡೆಂಜಿಮಾರ್ ಪ್ರಥಮ ಸ್ಥಾನ ಪಡೆದು ಮುಂದೆ ಉತ್ತರಪ್ರದೇಶದಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಮಡೆಂಜಿಮಾರು ಭಾಗೀರಥಿ ಜಯರಾಮ ಗೌಡ ದಂಪತಿ ಪುತ್ರನಾಗಿರುತ್ತಾರೆ. ಇವರಿಗೆ ಸಂಸ್ಥೆಯ ಆಡಳಿತ ಮಂಡಳಿ, ಮುಖ್ಯಮಾತಾಜಿ, ಸಹಶಿಕ್ಷಕರ ಸಹಕಾರದೊಂದಿಗೆ ಕರಾಟೆ ಗುರು ಚಂದ್ರಶೇಖರ ಕನಕಮಜಲು ತರಬೇತಿ ನೀಡಿರುತ್ತಾರೆ.
Home ಇತ್ತೀಚಿನ ಸುದ್ದಿಗಳು ವಿದ್ಯಾಭಾರತಿ ಪ್ರಾಂತ ಮಟ್ಟದ ಕರಾಟೆ ಸ್ಪರ್ಧೆ : ಆಲಂಕಾರು ಭಾರತಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ...