ಕೆದಂಬಾಡಿ ಶ್ರೀ ಕ್ಷೇತ್ರ ಸನ್ಯಾಸಿಗುಡ್ಡೆ ಶ್ರೀ ರಾಮ ಮಂದಿರದಲ್ಲಿ ನವರಾತ್ರಿ ಉತ್ಸವ

0

ಏಳನೇ ದಿನದ ಸಂಭ್ರಮ- ಭಜನಾ ಸೇವೆ, ನೃತ್ಯ ಕಾರ್ಯಕ್ರಮ

ಪುತ್ತೂರು: ಕೆದಂಬಾಡಿ ಗ್ರಾಮದ ಶ್ರೀ ಕ್ಷೇತ್ರ ಸನ್ಯಾಸಿಗುಡ್ಡೆ ಶ್ರೀ ರಾಮ ಮಂದಿರದಲ್ಲಿ ನವರಾತ್ರಿ ಉತ್ಸವವು ಸೆ.22 ರಿಂದ ಆರಂಭಗೊಂಡಿದ್ದು ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸಂಭ್ರಮದಿಂದ ಜರಗುತ್ತಿದೆ. ಸೆ.28 ರಂದು ರಾತ್ರಿ ನಾಲ ಕೃಷ್ಣ ರೈ ಮುಂಡಾಳಗುತ್ತು ಸೇವಾರ್ಥವಾಗಿ ಮಡ್ಯಂಗಳ ಶ್ರೀ ವೆಂಕಟರಮಣ ಭಜನಾ ಮಂಡಳಿ ಕಲ್ಲೇರಿ ಮಠ ಇದರಿಂದ ಭಜನಾ ಕಾರ್ಯಕ್ರಮ ನಡೆಯಿತು.

ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ ಶ್ರೀ ಶಾರದಾ ಕಲಾಕೇಂದ್ರ ಕುಂಬ್ರ ಶಾಖೆಯ ವಿದುಷಿ ದೀಪ್ತಿ ಡಿ.ಬಿ ಇವರ ಶಿಷ್ಯವೃಂದದವರಿಂದ ‘ ನೃತ್ಯ ಸಮೂಹ’ ನೃತ್ಯ ಕಾರ್ಯಕ್ರಮ ಜರಗಿತು. ಕಾರ್ಯಕ್ರಮದ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ಊರ ಪರವೂರ ನೂರಾರು ಭಕ್ತಾಧಿಗಳು ಆಗಮಿಸಿ ಅನ್ನಪ್ರಸಾದ ಸ್ವೀಕರಿಸಿದರು. ಶ್ರೀರಾಮ ಮಂದಿರದ ಆಡಳಿತ ಸಮಿತಿ ಅಧ್ಯಕ್ಷ ರಾಘವ ಗೌಡ ಕೆರೆಮೂಲೆ, ಪ್ರ.ಕಾರ್ಯದರ್ಶಿ ಅಗರಿ ಯಶೋಧರ ಚೌಟ ಪಟ್ಟೆತ್ತಡ್ಕ, ಕೋಶಾಧಿಕಾರಿ ಮುಂಡಾಳಗುತ್ತು ಮೋಹನ ಆಳ್ವ, ಶ್ರೀ ರಾಮ ಭಜನಾ ಸಮಿತಿಯ ಅಧ್ಯಕ್ಷ ವಿನೋದ್ ಕುಮಾರ್ ಕೋಡಿಯಡ್ಕ, ಕಾರ್ಯದರ್ಶಿ ನಿತೇಶ್ ರೈ ಕೋರಂಗ ಹಾಗೂ ಆಡಳಿತ ಸಮಿತಿ ಮತ್ತು ಭಜನಾ ಸಮಿತಿಯ ಸರ್ವ ಸದಸ್ಯರುಗಳು, ಭಕ್ತಾಧಿಗಳು ಭಾಗವಹಿಸಿದ್ದರು.


ಇಂದು ಶ್ರೀ ದುರ್ಗಾನಮಸ್ಕಾರ ಪೂಜೆ, ಆಯುಧಪೂಜೆ…
ಸೆ.29 ರಂದು ಸಂಜೆ 6.30 ರಿಂದ ವೇದಮೂರ್ತಿ ಕೃಷ್ಣಕುಮಾರ್ ಉಪಾಧ್ಯಾಯ ಪಟ್ಲಮೂಲೆ ಇವರಿಂದ ಶ್ರೀ ದುರ್ಗಾನಮಸ್ಕಾರ ಪೂಜೆ ನಡೆಯಲಿದ್ದು ಬಳಿಕ ಭಜನಾ ಸೇವೆ, ರಾತ್ರಿ 8.30 ರಿಂದ ಸಾಮೂಹಿಕ ಆಯುಧ ಪೂಜೆ ನಡೆಯಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಶ್ರೀ ಕ್ಷೇತ್ರದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here