ಕಡಬ ತಾಲೂಕು ಭೂನ್ಯಾಯ ಮಂಡಳಿಗೆ ನ್ಯಾಯವಾದಿ ಇಸ್ಮಾಯಿಲ್ ನೆಲ್ಯಾಡಿ ನಾಮನಿರ್ದೇಶನ

0

ನೆಲ್ಯಾಡಿ: ಕಡಬ ತಾಲೂಕು ಭೂ ನ್ಯಾಯ ಮಂಡಳಿಗೆ ನೆಲ್ಯಾಡಿ ನಿವಾಸಿ, ನೋಟರಿ ಹಾಗೂ ವಕೀಲ ಇಸ್ಮಾಯಿಲ್ ನೆಲ್ಯಾಡಿ ಅವರನ್ನು ನಾಮನಿರ್ದೇಶನಗೊಳಿಸಿ ಕಂದಾಯ ಇಲಾಖಾ(ಭೂ ಸುಧಾರಣೆ) ಅಧೀನ ಕಾರ್ಯದರ್ಶಿಯವರು ಆದೇಶ ಮಾಡಿದ್ದಾರೆ.


ನೆಲ್ಯಾಡಿ ಪ್ರಿಯದರ್ಶಿನಿ ಕಾಂಪೌಂಡ್ ನಿವಾಸಿ ಎನ್.ಇಬ್ರಾಹಿಂರವರ ಪುತ್ರರಾದ ಇಸ್ಮಾಯಿಲ್‌ರವರು ವೃತ್ತಿಯಲ್ಲಿ ವಕೀಲರಾಗಿದ್ದಾರೆ. ಇವರು ನೆಲ್ಯಾಡಿ ಪಿಎಂಶ್ರೀ ಸರಕಾರಿ ಉನ್ನತೀಕರಿಸಿದ ಹಿ.ಪ್ರಾ.ಶಾಲೆಯ ಪೂರ್ವ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ, ನೆಲ್ಯಾಡಿ ಸಂತಜಾರ್ಜ್ ಪ.ಪೂ.ಕಾಲೇಜು ಪೂರ್ವ ವಿದ್ಯಾರ್ಥಿ ಸಂಘದ ಕೋಶಾಧಿಕಾರಿಯಾಗಿ, ಪುತ್ತೂರು ಸೀರತ್ ಕಮಿಟಿ ಕಾರ್ಯದರ್ಶಿಯಾಗಿ, ಮಂಗಳೂರು ಹಿದಾಯ ಪೌಂಡೇಶನ್ ಕಾನೂನು ಸಲಹೆಗಾರರಾಗಿ, ನೆಲ್ಯಾಡಿ ಬದ್ರಿಯಾ ಜುಮಾ ಮಸೀದಿ ಲೆಕ್ಕ ಪರಿಶೋಧಕರಾಗಿ ಸಹಿತ ವಿವಿಧ ಸಂಘಟನೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ದ.ಕ.ಜಿಲ್ಲಾ ವಕ್ಪ್ ಸಲಹಾ ಸಮಿತಿ ಸದಸ್ಯರಾಗಿ, ಪುತ್ತೂರು ತಾಲೂಕು ಕೆಡಿಪಿ ಸದಸ್ಯರಾಗಿಯೂ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ.

LEAVE A REPLY

Please enter your comment!
Please enter your name here