ಉಪ್ಪಿನಂಗಡಿ ಸಿಎ ಬ್ಯಾಂಕ್: 1 ಸ್ಥಾನಕ್ಕೆ ಚುನಾವಣೆ – ಐದು ಮಂದಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

0

ಉಪ್ಪಿನಂಗಡಿ: ಸಹಕಾರಿ ವ್ಯವಸಾಯಿಕ ಸಂಘ ನಿ. ಉಪ್ಪಿನಂಗಡಿ ಇದರ ಆಡಳಿತ ಮಂಡಳಿಯಲ್ಲಿ ತೆರವಾದ ನಿರ್ದೇಶಕ ಸ್ಥಾನದ ಚುನಾವಣೆಯು ಅ.19ರಂದು ನಡೆಯಲಿದ್ದು, ಕೃಷಿ ಕ್ಷೇತ್ರದ ಸಾಮಾನ್ಯ ಸ್ಥಾನಕ್ಕೆ ನಡೆಯುವ ಚುನಾವಣೆಗೆ ಈಗಾಗಲೇ ಐದು ಮಂದಿ ನಾಮಪತ್ರ ಸಲ್ಲಿಸಿದ್ದಾರೆ. ಅ.12ರಂದು ನಾಮಪತ್ರ ಪರಿಶೀಲನೆ ನಡೆದಿದ್ದು, ನಾಮಪತ್ರಗಳೆಲ್ಲವೂ ಕ್ರಮಬದ್ಧವಾಗಿವೆ.


ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳಾಗಿ ಪ್ರಕಾಶ್ ರೈ ಬಿ., ಸದಾನಂದ ಶೆಟ್ಟಿ ನಾಮಪತ್ರ ಸಲ್ಲಿಸಿದ್ದಾರೆ. ಪುತ್ತಿಲ ಪರಿವಾರದಿಂದ ಹರಿಪ್ರಸಾದ್ ಶೆಟ್ಟಿ ಹಾಗೂ ಧರ್ನಪ್ಪ ನಾಯ್ಕ ನಾಮಪತ್ರ ಸಲ್ಲಿಸಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಬಾಲಚಂದ್ರ ಜಿ. ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಹಿಂಪಡೆಯಲು ಅ.13 ಕೊನೆಯ ದಿನಾಂಕವಾಗಿದೆ.
ಕೃಷಿ ಕ್ಷೇತ್ರದ ಸಾಮಾನ್ಯ ಸ್ಥಾನದಿಂದ ಚುನಾಯಿತರಾಗಿದ್ದ ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿ ಸದಾನಂದ ಶೆಟ್ಟಿಯವರ ನಿಧನದಿಂದ ತೆರವಾದ ಸ್ಥಾನಕ್ಕೆ ಈ ಚುನಾವಣೆ ನಡೆಯಲಿದೆ.

LEAVE A REPLY

Please enter your comment!
Please enter your name here