ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ಸಭಾಂಗಣದಲ್ಲಿ ಬೆಳಿಗ್ಗೆ ೧೦ರಿಂದ ಪುತ್ತೂರು ಕಂಪಾನಿಯೋ ನೆಮ್ಮದಿ ವೆಲ್ನೆಸ್ ಸೆಂಟರ್ನಿಂದ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ, ಉಚಿತ ಮಾಹಿತಿ ಕಾರ್ಯಕ್ರಮ
ಪುತ್ತೂರು ಪಶು ಆಸ್ಪತ್ರೆಯಲ್ಲಿ ವಿಶ್ವ ರೇಬೀಸ್ ದಿನಾಚರಣೆಯ ಅಂಗವಾಗಿ ಸಾಕುನಾಯಿಗಳಿಗೆ ಉಚಿತ ರೇಬೀಸ್ ಲಸಿಕಾ ಕಾರ್ಯಕ್ರಮ, ಮಾಹಿತಿ ಶಿಬಿರ
ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ನಿಂದ ಗಾಂಧಿ ಜಯಂತಿ ಸಂಭ್ರಮಾಚರಣೆಯ ಪ್ರಯುಕ್ತ ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಗಾಂಧಿಸ್ಮೃತಿ, ಜನಜಾಗೃತಿ ಸಮಾವೇಶ
ಕಲ್ಲಾರೆ ಡಾ. ನಝೀರ್ ಅಹಮ್ಮದ್ರವರ ಕ್ಲಿನಿಕ್ನಲ್ಲಿ ಬೆಳಿಗ್ಗೆ ೯.೩೦ರಿಂದ ಮಾಸಿಕ ಥೈರಾಯಿಡ್ ಗ್ರಂಥಿಯ ತಪಾಸಣೆ, ಹೆಚ್ಬಿಎ೧ಸಿ ಮಧುಮೇಹ, ನ್ಯೂರೋಪಥಿ ಉಚಿತ ತಪಾಸಣೆ
ಸವಣೂರು ಗ್ರಾ.ಪಂ ಕಚೇರಿಯಲ್ಲಿ ಬೆಳಿಗ್ಗೆ ೧೦ಕ್ಕೆ sಸಾಮಾನ್ಯ ಸಭೆ
೩೪ ನೆಕ್ಕಿಲಾಡಿ ಗ್ರಾ.ಪಂ.ನಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಗ್ರಾ.ಪಂ.ಸಾಮಾನ್ಯ ಸಭೆ
ಕಡಬ ಪಟ್ಟಣ ಪಂಚಾಯತ್ ಸಭಾಂಗಣದಲ್ಲಿ ಬೆಳಿಗ್ಗೆ ೧೧ ಗಂಟೆಗೆ ಪಟ್ಟಣ ಪಂಚಾಯತ್ ವಿಶೇಷ ಸಾಮಾನ್ಯ ಸಭೆ
ಉತ್ತರಕ್ರಿಯೆ
ಪುತ್ತೂರು ಕೊಂಬೆಟ್ಟು ಎಂ. ಸುಂದರ ರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಮಧ್ಯಾಹ್ನ ೧೨ಕ್ಕೆ ಬಳ್ಳಮಜಲುಗುತ್ತು ಬೋಳೋಡಿ ಸೀತಾರಾಮ ಆಳ್ವರ ಪತ್ನಿ ಕುಂಬ್ರ ಜನನ ಲಲಿತಾ ಎಸ್. ಆಳ್ವರವರ ಉತ್ತರಕ್ರಿಯೆಯ ವೈಕುಂಠ ಸಮಾರಾಧನೆ, ಶ್ರದ್ಧಾಂಜಲಿ ಸಭೆ
ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ನೇತ್ರಾವತಿ ಸಭಾಭವನದಲ್ಲಿ ಮಧ್ಯಾಹ್ನ ೧೨ಕ್ಕೆ ಪಾಲ್ತಾಡು ದಿ| ಪಿ. ಶ್ರೀನಿವಾಸ ಆಳ್ವರ ಪತ್ನಿ ನಡಿಬೈಲುಬೀಡು ಲಕ್ಷ್ಮಿ ಎಸ್. ಆಳ್ವರವರ ಉತ್ತರಕ್ರಿಯೆ