ಪುತ್ತೂರು: ಅ.20ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆದ ಅಶೋಕ ಜನಮನ 2025 ದೀಪಾವಳಿ ವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ಭಾರೀ ಜನ ಸೇರಿದ ಪರಿಣಾಮ ಕೆಲವರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದ್ದು, ಅ.20ರಂದು ರಾತ್ರಿ ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಅಶೋಕ್ ರೈ ಅವರ ಆರೋಗ್ಯ ವಿಚಾರಿಸಿದರು.

ಅಸ್ವಸ್ಥರಾದವರನ್ನು ಕೂಡಲೇ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೆಲವರು ಚಿಕಿತ್ಸೆ ಪಡೆದು ತೆರಳಿದ್ದು, ಮಹಿಳೆಯರಿಬ್ಬರು ರಾತ್ರಿ ವೇಳೆ ಆಸ್ಪತ್ರೆಯಲ್ಲಿದ್ದರು. ಅವರನ್ನು ಶಾಸಕ ಅಶೋಕ್ ರೈ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.