





ಕಾವು:ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ,ಸರ್ವೋದಯ ಪ್ರೌಢಶಾಲೆ ಸುಳ್ಯಪದವು ಇಲ್ಲಿ ಅ.24 ರಂದು ಪುತ್ತೂರು ಗ್ರಾಮಾಂತರ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಾವು ಬುಶ್ರಾ ಆಂಗ್ಲ ಮಾಧ್ಯಮ ಶಾಲೆಯ 17ರ ವಯೋಮಾನದ ಬಾಲಕರ ತಂಡ ಪ್ರಶಸ್ತಿ ಹಾಗೂ ಶಾಲಾ ಸಮಗ್ರ ಪ್ರಶಸ್ತಿ ಗಳಿಸಿಕೊಂಡಿದೆ.


ಮಹಮದ್ ಶಮಿಮ್ 10ನೇ ತರಗತಿ ಮತ್ತು ಶಾಜ್ನ 7ನೇ ತರಗತಿ ಈ ವಿದ್ಯಾರ್ಥಿಗಳು ವೈಯಕ್ತಿಕ ಬಹುಮಾನಗಳನ್ನು ಪಡೆದುಕೊಂಡಿರುತ್ತಾರೆ. ವಿದ್ಯಾಸಂಸ್ಥೆಯ ಮುಖ್ಯಗುರುಗಳು ದೀಪಿಕಾ ಚಾಕೋಟೆ ಇವರ ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಣ ಶಿಕ್ಷಕಿ ತ್ರಿವೇಣಿ ಕುಲಾಲ್ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದರು. ಸಹಶಿಕ್ಷಕಿ ಹೇಮಮಾಲಿನಿ ಮತ್ತು ಸಹಶಿಕ್ಷಕ ಉಮೇಶ್ ನಾಯ್ಕ್ ಇವರು ತಂಡದ ವ್ಯವಸ್ಥಾಪಕರಾಗಿ ಸಹಕರಿಸಿದರು.







 
            
