ವಿದ್ಯಾಭಾರತಿ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆ : ವಿವೇಕಾನಂದ ಪ.ಪೂ ವಿದ್ಯಾಲಯದ ಪೃಥ್ವಿಶ್ ಬಿ ರೈ ಎಸ್.ಜಿ.ಎಫ್.ಐ ಗೆ ಆಯ್ಕೆ

0

ಪುತ್ತೂರು: ಶ್ರೀ ಜಿ. ಬಾಬಾ ಸರಸ್ವತಿ ವಿದ್ಯಾಮಂದಿರ ಗೋವರ್ಧನ ರಸ್ತೆ ಮಥುರಾ ಇಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳು ಭಾಗವಹಿಸಿ ಬಹುಮಾನ ಪಡೆದಿರುತ್ತಾರೆ.

ಪ್ರಥಮ ವಿಜ್ಞಾನ ವಿಭಾಗದ ಪೃಥ್ವಿಶ್ ಬಿ ರೈ ಇವರು ಚಿನ್ನದ ಪದಕವನ್ನು ಪಡೆದು ಸ್ಕೂಲ್ ಗೇಮ್ ಫೆಡರೇಶನ್ ಆಫ್ ಇಂಡಿಯ (ಎಸ್.ಜಿ.ಎಫ್.ಐ ) ನಡೆಸುವ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ದ್ವಿತೀಯ ವಾಣಿಜ್ಯ ವಿಭಾಗದ ಪ್ರಾಪ್ತಿ ಶೆಟ್ಟಿ ಹಾಗೂ ರಾಮ್ ಪ್ರಸಾದ್ ಬೆಳ್ಳಿಯ ಪದಕವನ್ನು ಪಡೆದುಕೊಂಡಿರುತ್ತಾರೆ. ಪ್ರಥಮ ವಿಜ್ಞಾನ ವಿಭಾಗದ ಘನಶ್ಯಾಮ್ ಇವರು ಕಂಚಿನ ಪದಕವನ್ನು ಪಡೆದಿರುತ್ತಾರೆ.


ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ವಿ. ಎಸ್., ಡಾ. ಜ್ಯೋತಿ ಕುಮಾರಿ ಮತ್ತು ಯತೀಶ್ ಇವರ ಮಾರ್ಗದರ್ಶನದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ಇವರನ್ನು ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here